ಎಜ್ರಾ ಪೌಂಡನ ಒಂದು ಕವಿತೆ

 ಫ್ರಾನ್ಸೆಸ್ಕಾ
 

ನೀ ಇರುಳಿಂದ ಹೊರಬರುತ್ತಿದ್ದೆ.
 ಆಗ ನಿನ್ನ ಕೈಗಳಲ್ಲಿ ಹೂವುಗಳಿರುತ್ತಿತು .
ಈಗ ಬರುತ್ತೀಯ ಹೊರಕ್ಕೆ
ಮಂದಿಯ ಗೊಂದಲಗಳಿಂದ,
ನಿನ್ನಕುರಿತ ಬೇಕಾಬಿಟ್ಟಿ ಮಾತುಗಳಿಂದ
ಬರೆಯ ಸರಳ ಸಂಗತಿಗಳ ಸುತ್ತ ನಿನ್ನ ಕಂಡವನು ನಾನು
ಈಗ ಉರಿಯುತ್ತದೆ ಮೈ.
 ಮಂದಿ  ನಿನ್ನ ಹೆಸರ ಸಾದಾ ಎಡೆಗಳಲ್ಲೂ ಎತ್ತುವಾಗ
ಈ ನೆತ್ತಿಯ ಮೇಲೆ ತಣ್ಣನೆ ಗಾಳಿಯಾಡುವಂತಿದ್ದರೆ ಸಣ್ಣಗೆ
ಎಲ್ಲ ಸತ್ತ ಎಲೆಯಹಾಗೆ ಒಣಗುವಂತಿದ್ದರೆ
ಎಲ್ಲ ಸಾಸುವೆಯ ಬೀಜಗಳಂತೆ ಕೊಚ್ಚಿ ಹೋಗುತ್ತಿದ್ದರೆ
ನಿನ್ನನ್ನೊಮ್ಮೆ ನೋಡಬಹುದಿತ್ತು
ಒಬ್ಬಳನ್ನೇ…….
 

ಒಂದು ಪುರಾತನ ಪ್ರೇಮ- ಒಂದು ಸಣ್ಣ ಕಥೆ.

 
                                                                                    [ರೇಖಾ ಚಿತ್ರಗಳು:ಚರಿತಾ] 

ಎಂದೆಂದಿಗೂ ಒಂದಾಗಲಾರರು ಎಂದು ಅಂದುಕೊಂಡಿದ್ದ ಈ ಪುರಾತನ ಪ್ರೇಮಿಗಳನ್ನು ನಾನು  ಸುಮಾರು ಕಾಲು ಶತಮಾನಗಳ ನಂತರ ಆದೂ ಕೆಸರು ರಾಡಿಚಿರಿಚಿರಿ ಮಳೆಯಲ್ಲಿ ಈ ವೀರಾಜಪೇಟೆಯ ಮಂಕು ಕವಿದ ಬಸ್ಸು ನಿಲ್ದಾಣದಲ್ಲಿ ಹೀಗೆ ಗಾಳಿಗೆ ಸಿಕ್ಕಿದ ತರಗೆಲೆಗಳ ಹಾಗೆ ಕಂಡುಬಿಡುವೆನೆಂದು ಅಂದು ಕೊಂಡಿರಲಿಲ್ಲ.  
ವೀರಾಜಪೇಟೆಯ ಆ ಪುಟ್ಟ ಗಜಿಬಿಜಿ ಖಾಸಗೀ ಬಸ್ಸು ನಿಲ್ದಾಣದಲ್ಲಿ ಕಂಡಕ್ಟರು ಏಜಂಟರುಗಳ ಕೂಗು, ಬಸ್ಸುಗಳ ತಾರಾಟ, ಹಳೆಯ ಲಟಾರಿ ಯಜ್ದಿ ಬೈಕುಗಳನ್ನು ಸುಮ್ಮನೆ ಸದ್ದು ಮಾಡುತ್ತಾ ಓಡಿಸುವ ಯುವಕರು,ಸೀರೆಯ ನೆರಿಗೆ ಎತ್ತಿಕೊಂಡು ನಡೆಯುವ ಯುವತಿಯರು,ಮಲಯಾಳಿ [...]

ಯೋಗಾಚಾರ್ಯ ನಾಗರಾಜ ಸೂರ್ಯನಾರಾಯಣ ಪಾಂಡೆ

 
ನಿನ್ನೆ ಸಂಜೆ ಮೈಸೂರಿನಲ್ಲಿ ಇನ್ನೇನು ಮಳೆ ಸುರಿಯುವ ಹಾಗೆ ಇತ್ತು. ಆದರೆ ಹಾಗೇನೂ ಆಗಲಿಲ್ಲ.  ನಾನು ಸುಮಾರು ಎರಡು ಗಂಟೆಗಳ ಹೊತ್ತು ಯೋಗಾಚಾರ್ಯ ನಾಗರಾಜ ಸೂರ್ಯನಾರಾಯಣ ಪಾಂಡೆಯವರ ಬಳಿ ಕಥೆ ಕೇಳುತ್ತಾ ಕುಳಿತಿದ್ದೆ.  ಒಂದಂತೂ ನಿಜ.  ಇನ್ನು ನೂರಾರು ವರ್ಷಗಳಷ್ಟು ಕಾಲ ಬರೆಯುವಷ್ಟು ವಿಷಯಗಳು ಅವರ ಬಳಿ ಇರುವುದು ಗೊತ್ತಾಯಿತು. ನನಗೆ ಮೈಸೂರಿನಲ್ಲಿ ಮಾತನಾಡಲು, ನನ್ನನ್ನು ಹರಸಲು ಇನ್ನೊಬ್ಬರು ಮಹಾ ಗುರುಗಳು ದೊರಕಿದರು ಎಂಬ ಆನಂದದಿಂದ ಅವರ ಬಳಿಯಿಂದ ಹೊರಟು ಬಂದು ಇದನ್ನು ಬರೆಯುತ್ತಿರುವೆ
 ನಾಗರಾಜ ಸೂರ್ಜನಾರಾಯಣ ಪಾಂಡೆಯವರು [...]

ಹೂವಿನ ಕೊಲ್ಲಿಯ ಪೂರ್ವ ದಿಕ್ಕಿನಲ್ಲಿ

ನಿನ್ನೆ ಹೂವಿನ ಕೊಲ್ಲಿಯ ಹತ್ತಿರ ಹೋಗಿದ್ದೆ. ಅಮ್ಮನ ಹತ್ತಿರ ಇನ್ನಷ್ಟು ಹಳೆಯ ವಿವರಗಳನ್ನು ಕೇಳಬೇಕಿತ್ತು.ಆದರೆ ಯಾಕೋ ಆಕೆ ತೀರಿಹೋದ ನನ್ನ ಅಪ್ಪನನ್ನೂ ಸೇರಿಸಿ ನನ್ನನ್ನೂ ಎಲ್ಲರನ್ನೂ ಕಠುವಾಗಿ ಟೀಕಿಸುತ್ತಿದ್ದಳು.ಯಾಕೋ ಆಕೆ ತೀರಾ ಸಂಕಟದಲ್ಲಿದ್ದಂತೆ ಇತ್ತು.ಪೆಚ್ಚಾಗಿ ಹೂವಿನಕೊಲ್ಲಿಯ ಪೂರ್ವ ದಿಕ್ಕಿನಲ್ಲಿರುವ ಈ ಹೊಳೆಬದಿಗೆ ಹೋದೆ.

ನಾಳೆ ಹೂವಿನಕೊಲ್ಲಿಯ ೧೩ನೇ ಕಂತು ಬರೆಯಬೇಕು.ಏನೂ ಗೊತ್ತಾಗುತ್ತಿಲ್ಲ………….

ತೀರಿ ಹೋಗಿರುವ ಸೂಫಿ ಬ್ಯಾರಿಯವರ ಕುರಿತು

ಸೂಫಿ ಸಂತನ ಸಂಸಾರ ತೋಟ…
 

ಹುಣ್ಣಿಮೆಯ ಮರುದಿನದ ಬೆಳದಿಂಗಳು. ಆ ದೊಡ್ಡ ಮಸೀದಿ ತೊಯ್ಯುತ್ತ ಮಲಗಿತ್ತು. ಚಂದ್ರನ ಕೆಳಗೆ ಚಂದಕ್ಕೆ ಹಾಸಿದಂತೆ ಒಂದು ತುಂಡು ಮೋಡ ಮುಸುಕಿಕೊಂಡು ಆಕಾಶದ ಅಳಿದುಳಿದ ಕತ್ತಲಿನ ಜಾಗದಲ್ಲಿ ಒಂದೊಂದು ನಕ್ಷತ್ರಗಳು ಮಿನುಗುತ್ತಿದ್ದವು. ಅಲ್ಲಲ್ಲಿ ಮಳೆಯ ಮೋಡಗಳು ನೀಲಿಗಟ್ಟಿಕೊಂಡು ಆ ಹೊತ್ತಲ್ಲಿ ಆ ಆಕಾಶ, ಈ ಭೂಮಿ ಮತ್ತು ಭೂಮಿಯ ಮೇಲಿರುವ ಈ ದೊಡ್ಡ ಮಸೀದಿ.
 ನೀನು ಯಾರೆಂದು ಯಾರಾದರೂ ಕೇಳಿದರೆ ನಾನು ಯಾರೆಂದು ಹೇಳಲಿ? ನಿನ್ನ ಹೆತ್ತವರು ಯಾರು, ನಿನ್ನ ಪಡೆದವನು ಯಾರು? ಎಂದು [...]

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ!

 
 ‘ಎನ್ನ ಕರದೊಳಗಿದ್ದು ಎನ್ನೊಳೇತಕೆ ಮುನಿವೆ?’ 
 ಮಲ್ಲಿಕಾರ್ಜುನ ಮನ್ಸೂರ್ ಹಾಡುತ್ತಿದ್ದಾರೆ.
‘ಕಾಣುತ್ತ ಕಾಣುತ್ತ ಕಂಗಳ ಮುಚ್ಚಿದೆ ನೋಡವ್ವಾ..ಕೇಳುತ್ತ ಕೇಳುತ್ತ ಮೈಮರೆತೊರಗಿದೆ ನೋಡವ್ವಾ.. ಹಾಸಿದ್ದ ಹಾಸಿಗೆಯಾ ಹಂಗಿಲ್ಲದೇ ಹೋಯಿತ್ತೂ..’ ಇನ್ನೊಂದು ಹಾಡು.
 ಸುಮ್ಮನೆ ಮುಚ್ಚಿಕೊಂಡು ಐದು ನೂರು ಪದಗಳನ್ನು ಬರೆಯಲು ಯಾಕಿಷ್ಟು ಸರ್ಕಸ್ಸು ಅನ್ನಿಸುತ್ತದೆ.ಬರೆಯುವುದು ಒಂದು ತರಹದ ದಿನನಿತ್ಯದ ವ್ಯಾಯಾಮದಂತಿರಬೇಕು.ದಿನಾ ಬೆಳಗಿನ ವಾಕಿಂಗಿನ ಹಾಗೆ.ಮಾಡುತ್ತಾ ಹೋಗಬೇಕು ಎಂದೆಲ್ಲಾ ಹೇಳಿದ್ದು ಎಲ್ಲ ಬರಹಗಾರರ ಗುರು ಸಮಾನನಾದ ಹೆಮಿಂಗ್ವೇ ಇರಬೇಕು.ಅಥವಾ ಇನ್ನೊಬ್ಬ ತೀರ್ಥರೂಪ ಸಮಾನರಾದ ಲಂಕೇಶ್!
 ’ಎನಗೆ ನಿಮ್ಮ ನೆನಹಾದಗಲೇ ಉದಯ, ಎನಗೆ  ಮರೆವಾದಾಗಲೇ ಅಸ್ತಮಾನ’ ಮನ್ಸೂರ್ ಈಗ [...]

ಈ ಚಿತ್ರ ತೆಗೆದ ಚಿತ್ರಗಾರನ ಹೆಸರೇನು?

ಮೈಸೂರಿನ ಜಗನ್ಮೋಹನ ಅರಮನೆಯ ಎದುರಿಗಿರುವ ಈ ಅಂಗಡಿಯಲ್ಲಿ ಹಳೆಯ ಕಲಾಕೃತಿಗಳೂ,ಅವುಗಳ ನಕಲು ಪ್ರತಿಗಳೂ ಸಿಗುತ್ತವೆ.

ಈ ಚಿತ್ರ ತೆಗೆದ ಛಾಯಾಚಿತ್ರಗಾರನ ಚಿತ್ರ ಕೆಳಗಿದೆ

ಇವರು ಯಾರೆಂದು ಹೇಳುತ್ತೀರಾ? ಇವರನ್ನು ಕಂಡರೆ ನಿಮಗೆ  ಯಾಕೆ ಅಷ್ಟೊಂದು ಇಷ್ಟ?…ಹೇಳುತ್ತೀರಾ..

ಪ್ರೊಫೆಸರ್ ವಿಕ್ರಂ ಹೇಳಿದ ‘ಚತುರಂಗ ಭವನ’ದ ಕಥೆ

ನನ್ನ ಪ್ರೀತಿಯ ಬರಹಗಾರ ದಿವಂಗತ ಚದುರಂಗ ಅವರ ನಿಜವಾದ ಹೆಸರು ಎಂ. ಸುಬ್ರಹ್ಮಣ್ಯ ರಾಜೇ ಅರಸ್ ಎಂಬುದು ಬಹಳ ಕಾಲದವರೆಗೆ ನನಗೆ ತಿಳಿದಿರಲಿಲ್ಲ. ಎಂ. ಅಂದರೆ ಮುದ್ದುರಾಜ ಅರಸ್. ಮುದ್ದುರಾಜ ಅರಸರು ಚದುರಂಗರ ತಂದೆ. ಅವರು ತಲಕಾಡಿನ ರಾಜವಂಶಕ್ಕೆ ಸೇರಿದವರು. ತಲಕಾಡು ಮರಳಿನಿಂದ ಮುಚ್ಚಿದಾಗ ಇವರ ಹಿರಿಯರು ಅಲ್ಲಿಂದ ಸಮೀಪದ ಪಾಳ್ಯಕ್ಕೆ ಹೋಗಿ ನೆಲೆಸಿ ಪಾಳ್ಯದ ಚತುರಂಗ ಅರಸು ಮನೆತನದವರು ಅಂತ ಹೆಸರಾದವರು. ಈ ಮನೆತನದ ಅರಸರು ಚದುರಂಗ ಕ್ರೀಡೆಯಲ್ಲಿ ಪ್ರವೀಣರಾಗಿದ್ದರಿಂದ ಇವರಿಗೆ ಆ ಹೆಸರು ವಂಶಪಾರಂಪರ್ಯವಾಗಿ [...]

ಈವತ್ತಿನ ಚಿತ್ರ

 ಇವತ್ತು ಈ ಚಿತ್ರ ಸಾಕು.

ಚಾಮುಂಡಿ ಬೆಟ್ಟದ ಮೆಟ್ಟಲ ಮೇಲೆ ಬತ್ತಿ ಮಾರುವ ಈತ
ಮತ್ತು ಸದಾ ಈತನ ಹಿಂದಿರುವ  ಈ ಆಕಳು
ಈವತ್ತು ಸೋಮವಾರ .
ಈ ದಿನ ದೂಡಲು ಇವರಿಬ್ಬರ ಮುಖದ ನೆನಪು ಸಾಕು

ವೈಕಂ ಮಹಮದ್ ಬಷೀರ್ ಎಂಬ ಕಾಲಜ್ಞಾನಿ

‘ಸುಂದರವಾದ ಈ ಭೂಗೋಳದಲ್ಲಿ ನನಗೆ ಪಡೆದವನು ಅನುಮತಿಸಿದ್ದ ಸಮಯ ಪರಿಪೂರ್ಣವಾಗಿ ಅವಸಾನಿಸಿತು. ಇನ್ನು ಸಮಯ ಕೊಂಚವೂ ಇಲ್ಲ. ಆ ಪಡೆದವನ ಭಂಡಾರದಲ್ಲಿ ಮಾತ್ರ ಸಮಯವಿದೆ. ಎಂದಿಗೂ, ಎಂದೆಂದಿಗೂ ಮುಗಿಯದ ಸಮಯ ಅನಂತ ಅನಂತವಾದ ಸಮಯ’ ‘ನಾನು ತೀರಿಹೋದೆ.. ನನ್ನ ಇನ್ನು ಯಾರಾದರು ನೆನಪಿಸಬೇಕೆ? ನನ್ನ ಯಾರೂ ನೆನಪಿಸುವುದು ಬೇಡ ಎಂದು ನನಗೆ ಅನ್ನಿಸುತ್ತಿದೆ. ಯಾಕೆ ನೆನಪಿಸುವುದು? ಕೋಟ್ಯಾನುಕೋಟಿ ಅನಂತ ಕೋಟಿ ಸ್ತ್ರೀ ಪುರುಷರು ತೀರಿಹೋಗಿಲ್ಲವೇ? ಅವರನ್ನು ಯಾರು ನೆನಪಿಸುತ್ತಾರೆ?’ ‘ನನ್ನ ಪುಸ್ತಕಗಳೆಲ್ಲ ಎಷ್ಟು ಕಾಲ ನೆಲೆ ನಿಲ್ಲಬಹುದು? [...]

ಮಲೆನಾಡಿನ ತರಳೆಯೊಬ್ಬಳ ಕವಿತೆಗಳು

 ನಾನು ಸಾಗರದ ಶಿಲಾಬಾಲಿಕೆ ಅಂತ ಹೇಳಿ ಒಬ್ಬರು ಕವಿತೆಗಳನ್ನು ಮೇಲ್ ಮಾಡಿದ್ದಾರೆ. ಓದಲು ಚೆನ್ನಾಗಿಯೇ ಇರುವ ಈ ಕವಿತೆಗಳು ನಿಮ್ಮ ಸಂತೋಷಕ್ಕಾಗಿ:
 

 
 
1

ಇದು ತೀರಾ ಖಾಸಗಿ ಸಂಗತಿ ಎಂಬಂತೆ
 ಉರಿಯ ನಡುವೆ ಮಳೆ ಎರಡು ಹನಿ
 ಬೀಳಿಸಿ  ಹೋಯಿತು.ಮಣ್ಣೆಲ್ಲ ‘ಘಂ‘ ಅಂತ ಪುಲಕಗೊಂಡು
ನೀ ಬಂದಾಗ ನನಗೆ ಆಗುವ ಹಾಗೆ
ಬನದಲ್ಲಿ ನವಿಲುಗಳು ಕೇಕೆ ಹಾಕಲು ತೊಡಗಿತು.

                     2
 ನನಗೆ ನೀಲ ವರ್ಣ ಬಲು ಹಿತವೆನಿಸುತ್ತೆ
ಅವನ ಹಿಮ್ಮಡಿಯ ಒಡೆದ ಬಿರುಕೂ ಅಷ್ಟೆ
ಮೈಯುಜ್ಜುವ ಹೊಳೆಯ ಕಲ್ಲಿನ ಹಾಗೆ
ವರದಾ ನದಿಯ ನೀರು ನೀಲಿ
ಅವನ ಬಣ್ಣಗಾರಿಕೆಯ ಮಾತುಗಳ ಹಾಗೆ!

 
3
 ನೀನು ಸಣ್ಣಗಿದ್ದೀಯಆದರೂ  ಚನ್ನಾಗಿದ್ದೀಯ
ಯಾಕೆ [...]

ಅಲ್ಬರ್ಟ್ ಕಮು ಬರೆದ ಒಂದು ಹಳೆಯ ಕಾದಂಬರಿ

ಪ್ಲೇಗ್ ಮಾರಿಯ ಮೇಲೆ ಮಾನವ ಭಾಷ್ಯ

ಎಂಟು ತಿಂಗಳ ಕಾಲ ಮರಣ ನರ್ತನ ನಡೆಸಿದ ಪ್ಲೇಗ್ ಮಾರಿ ಆಯಾಸಗೊಂಡಂತೆ ನಟಿಸುತ್ತಾ ಹಿಮ್ಮೆಟ್ಟಿದ್ದಾಳೆ. ಮರಣ ಭಯದಲ್ಲಿ ಕಳೆದ ಈ ನಗರ ಇದ್ದಕ್ಕಿದ್ದಂತೆ ಉಲ್ಲಾಸಗೊಳ್ಳುತ್ತಿದೆ. ಹೊರ ಜಗತ್ತಿಗೆ ಮುಚ್ಚಿಕೊಂಡಿದ್ದ ನಗರದ ಬಾಗಿಲುಗಳು ತೆರೆದುಕೊಂಡಿವೆ. ಅಗಲಿ ಇದ್ದವರು ಒಂದಾಗುತ್ತಿದ್ದಾರೆ. ಪ್ರೇಮಿಗಳು, ಗಂಡ-ಹೆಂಡತಿಯರು ತೆರೆದ ತೋಳುಗಳಿಂದ ನಡು ಬೀದಿಯಲ್ಲೇ ಒಬ್ಬರನ್ನೊಬ್ಬರು ಅಪ್ಪಿಕೊಳ್ಳುತ್ತಿದ್ದಾರೆ. ನಿಂತು ಹೋಗಿದ್ದ ರೈಲ್ವೆ ಎಂಜಿನ್‌ಗಳಿಂದ ಹೊಗೆ ಏಳುತ್ತಿದೆ. ಮುಚ್ಚಿದ್ದ ನಗರದ ಬಂದರಿಗೆ ಹಡಗುಗಳು ಬರತೊಡಗಿವೆ. ಪ್ಲೇಗಿನಿಂದ ಬದುಕಿ ಉಳಿದ ಜನ ಮೈಮರೆತು [...]

ಒಂದು ದಶಕದ ಹಿಂದಿನ ಒಂದು ಪ್ರಬಂದ…..

 ಯಾಕೆ ಈ ಪ್ರೇಮದ ಜೀವಕೆ ಸಾವಿನ ಚಿಂತೆ…..

  ಪುಟ್ಟ ಹುಡುಗಿಯಾಗಿದ್ದ ಈ ಚಂದದ ಹುಡುಗಿ ಈಗ ದೊಡ್ಡವಳಾದ ಮೇಲೂ ಮರೆಯದೆ ಸುಂದರವಾದ ರಾಖಿಯೊಂದನ್ನು ಅಂಚೆಯಲ್ಲಿ ಕಳುಹಿಸಿದ್ದಾಳೆ. ಪತ್ರದಲ್ಲಿ ಏನು ಏನೆಲ್ಲ ಹುಚ್ಚು ಹುಚ್ಚಾಗಿ ಮೊದ್ದು ಮೊದ್ದಾಗಿ ತುಂಟತನದಿಂದ ಬರೆದಿದ್ದಾಳೆ. ಅವಳು ಕಳುಹಿಸಿದ ಈ ಪಂಚವರ್ಣದ ರಾಖಿ ಮಳೆಯಲ್ಲಿ ನೆನೆದು ಬಿಸಿಲಲ್ಲಿ ಒಣಗಿ ಕೈಯ ಮೊಣಗಂಟಿನ ಬಳಿಯಲ್ಲಿ ವಿಚಿತ್ರವಾದ ಚಿತ್ರಗಳನ್ನು ಮೂಡಿಸಿದೆ. ನಾನು ಇವಳ ವೈಖರಿಯ ಕುರಿತು ಯೋಚಿಸುತ್ತಿದ್ದೇನೆ. ಚಂದದ ಪುಟ್ಟ ಹುಡುಗಿಯಾಗಿದ್ದ ಇವಳು ಬೆಳೆದು ಪುಟ್ಟ ಹೆಂಗಸಾಗಿರುವುದು [...]

ಬೈಕು ಪಾಲಿಸುವ ಮರಳು ಗೋಪಾಲ

             
ಈ ಬೈಕಿನ ರಿಮ್ಮು ಒರೆಸುವ ಮರಳು ಗೋಪಾಲನ ಕುರಿತು ಗದ್ಯದಲ್ಲಿ ಬರೆಯುವುದೋ ಪದ್ಯದಲ್ಲಿ ಬರೆಯುವದೋ ಎಂದು ನನಗೆ ಇನ್ನೂ ಗೊತ್ತಾಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಈ ತರಹದ ಸಂದಿಗ್ಧತೆ ಎಂದೂ ಎದುರಾಗಿಯೂ ಇರಲಿಲ್ಲ. ನನ್ನ ಬೈಕಿನ ಬೇರೆ ಎಲ್ಲಾ ಭಾಗಗಳೂ ಕೊಳೆಯಿಂದ ತುಂಬಿದ್ದರೂ ಚಕ್ರಗಳ ನಡುವಿನ ಲೋಹದ ರಿಮ್ಮುಗಳು ಯಾವಾಗಲೂ ಪಳಪಳನೆ ಹೊಳೆಯುತ್ತಿರುವ ಹಿಂದಿನ ಗುಟ್ಟು ಈವತ್ತಿನವರೆಗೆ ನನ್ನ ಹೆಂಡತಿಗೂ ಗೊತ್ತಿರಲಿಲ್ಲ. ಈವತ್ತು ಬರೆಯುವ ಮೊದಲು ಈ ಕುರಿತು ನನ್ನೊಳಗೂ ಇರುವ ಗೊಂದಲಗಳನ್ನು ನಿವಾರಿಸುವ ಸಲುವಾಗಿ ಆಕೆಗೆ ಮರಳು [...]

ಲಂಕೇಶರ ಕೊನೆಯ ದಿನಗಳು

[ಕಿ.ರಂ,ಲಂಕೇಶ್ ಜೊತೆಯಲ್ಲಿ]
ಬಹುಶಃ ಬದುಕಿದ್ದರೆ ಲಂಕೇಶರಿಗೆ  ೭೧ ವರ್ಷ ತುಂಬಿ ಎರಡು ತಿಂಗಳಾಗುತ್ತಿತ್ತು. ಈ ತುಂಬುತ್ತಿತ್ತು ಅನ್ನುವುದನ್ನು ಲಂಕೇಶ್ ಶೈಲಿಯಲ್ಲಿಯೇ ಯೋಚನೆ ಮಾಡುವುದಾದರೆ  ಅವರಿಗೆ ಈಗ ಮಕ್ಕಳಿಂದ ಒದ್ದು ಹೊರಗೆ ಹಾಕಿಸಿಕೊಳ್ಳುವ ವಯಸ್ಸು.
ಒಂದು ಸಲ ನಾನು ಸ್ವಲ್ಪ ಕೃತಕ ಭಾವುಕತೆ ತುಂಬಿಸಿಕೊಂಡು `ಸರ್,ನಿಮ್ಮ`ಅವ್ವ’ಕವಿತೆ… ಬಹುಶಃ ನಿಮ್ಮ ಅವ್ವ ಬದುಕಿದ್ದಿದ್ದರೆ..’ಅಂತೆಲ್ಲ ಹೇಳಿ ಅವರನ್ನು ಪೂಸಿ ಹೊಡೆಯಲು ನೋಡಿದ್ದೆ.
`ಅಯ್ಯೋ ಮಾರಾಯ ಅವಳೇನಾದರೂ ಈಗಲೂ ಬದುಕಿದ್ದರೆ ದೊಡ್ಡ ರಗಳೆಯಾಗಿರೋದು.ಯಾರುಯಾರು ಯಾವಯಾವ ಕಾಲದಲ್ಲಿ ಸಾಯಬೇಕೋ ಆಗ ಸಾಯಬೇಕು.ಇಲ್ಲದಿದ್ರೆ ಫಜೀತಿ ಯಾಗೋದು’ ಅಂತ ಅವರ ನಾಚುಕೆಯ [...]

ಒಂದು ಸಣ್ಣ ಕವಿತೆ

ನಿನ್ನ ವಾಸನೆ ಸೂಸಲಿ ಈ ಚಾದರದಲ್ಲಿ……

 ನಿನ್ನ ಮೈವಾಸನೆ ಸೂಸಲಿ ಈ ಚಾದರದಲ್ಲಿ
ನೆನಪೆಂಬುದು ಬೇಡ ಇರುವಾಗಲೇ…
ಹಾಗೆ ನೋಡಿದರೆ ನಾವು ಕೂಡಿದ್ದೇ ಇಲ್ಲ
ಕಂಡೇ ಇಲ್ಲ.ಎಣಿಸಿದ್ದು ಮಾತ್ರ
ಏನೆಲ್ಲಾ ನಡೆಸಿರುವೆವೆಂದು.
 ನೀನು ಬೆಳಕ ಪುತ್ಥಳಿ,ಒಂದು ಅನನ್ಯ ಪರಿಮಳ,
ಬೆಳಗೇ ತಲೆಕೆಳಗೆ ಬಿದ್ದ ಪಾರಿಜಾತ.
ನೀನು ನಕ್ಷತ್ರಮುಖಿ ಕೋಲು ಬೆಳಕು
 ಮೈಯ್ಯ ಕತ್ತಲೊಳಕ್ಕೆ ಬಾಚಿ ಎಳೆದು ನನ್ನ ಕಣ್ಣ ಮುಚ್ಚಿದವಳು.
 ಮಲೆಯ ಒರತೆಯಂತವಳು.
ನಿನ್ನ ಮೈ ವಾಸನೆ ಸೂಸಲಿ ಈ ಚಾದರದಲ್ಲಿ.
ನೆನಪೆಂಬುದು ಯಾಕೆ ಇರುವಾಗಲೇ.
 ಜಿನುಗು ಜಿನುಗುತ್ತಲೇ ಸುಖ ಸಂಕಟ
ಇನ್ನು ಇನ್ನೇನೋ ಗೊತ್ತಿಲ್ಲದ ಸದ್ದ ಅದುಮಿ ಹಿಡಿದವಳು.
 ನೀನು ಕಳ್ಳಗುಟ್ಟಿನ ಹೆಣ್ಣು, ಹೆತ್ತ ಎದೆಯವಳು
ಚೂಟಾಟದ ಹುಡುಗಿ, [...]

ಅಚಲ್ ರಹೋ ರಾಜಾ : ದೇವತೆಯರಲ್ಲಿ ಒಂದು ಮೊರೆ

  
ಈ ನಡುರಾತ್ರಿಯಲ್ಲಿ ಆ ಕೂಗು ಹಾಗೆಯೇ ಇನ್ನೂ ಕೇಳಿಸುತ್ತಿದೆ.ಕಾಲ ಇಷ್ಟು ಕಳೆದಿದ್ದರೂ ಆ ಕೂಗು ಇನ್ನೂ ಹಾಗೆಯೇ.ಕಾಫಿ ತೋಟದ ನಮ್ಮ ಬಿಡಾರದ ಮುಂದೆ ಸದಾ ಎರಡು ಮುತ್ತೈದೆಯರ ಹಾಗೆ ನಿಂತುಕೊಂಡಿದ್ದ ಜೋಡಿ ಪೇರಳೆ ಮರಗಳು.ಒಂದು ಬಟರ್ ಫ್ರೂಟಿನ ಅಸಹಾಯಕ ಮರ.ಪೇರಳೆ ಮರಗಳಿಗೆ ಜೋತು ಬಿದ್ದು ಪವಡಿಸಿದ್ದ ಮಲ್ಲಿಗೆಯ ಬಳ್ಳಿ.ಅದರಲ್ಲಿ ಆಗಾಗ ಕಂಡು ಬರುತ್ತಿದ್ದ ಪುಡಿ ಮಕ್ಕಳಂತಹ ಮಲ್ಲಿಗೆ ಮೊಗ್ಗುಗಳು.ಒಂದು ಕಂಬಳಿ ಹಣ್ಣಿನ ಗಿಡ.ಕೆಳಗೆ ಏಲಕ್ಕಿ ಕಾಡು.ಬತ್ತದ ಗದ್ದೆ.ಅಲ್ಲೇ ಎಲ್ಲೋ ಇದ್ದ ಒಂದು ಕೊಳ.ಅದರ ಸುತ್ತಲೂ ಏಡಿ ಮಣ್ಣಲ್ಲಿ [...]

ಕಿ.ರಂ.ನಾಗರಾಜ್ ಎಂಬ ಗಾರುಡಿಗ

 
ಶ್ರಾವಣದ ಕೊನೆಯ ಶನಿವಾರ ಅಪರಾಹ್ನ. ಕೊತ್ತಂಬರಿ, ಮೆಂತೆ ಸೊಪ್ಪು, ಚೆಂಡು ಹೂ, ಸೇವಂತಿಗೆ. ಕುಂಕುಮ, ಅಗರಬತ್ತಿ ಮತ್ತು ಬೀದಿಯ ತುಂಬ ತಳ್ಳಾಡುತ್ತಾ ಹೆಗಲಿಗೆ ಒರೆಸಿ ಬೆವರುತ್ತ ನಡೆಯುತ್ತಿರುವ ಮಂದಿಯ ಮಿಶ್ರ ಪರಿಮಳ.
ಕಿ.ರಂ ನನ್ನನ್ನು ಬೆಂಗಳೂರಿನ ಕೃಷ್ಣರಾಜ ಮಾರುಕಟ್ಟೆಗೆ ತಾಗಿಕೊಂಡಿರುವ ರಸ್ತೆಗಳಲ್ಲಿ ನಡೆಸುತ್ತಿದ್ದರು. ಎಲ್ಲ ದೇವಾಲಯಗಳೂ, ದೇವ ದೇವತೆಗಳೂ ಹಳದಿಯ ಹೂಗಳಿಂದ ಅಲಂಕೃತಗೊಂಡು ಸಂಜೆಗೆ ಬರುವ ಭಕ್ತರನ್ನು ಕಾಯುತ್ತಿದ್ದವು.. ಈ ದೇವರುಗಳು, ಈ ದೇವತೆಗಳು, ಈ ತಳ್ಳುವ ಜನರು, ಈ ಅಗಾಧ ಮನುಷ್ಯವಾಸನೆ ಮತ್ತು ಹೂವುಗಳ ಪರಿಮಳ. ನಾವು [...]

ಒಂದು ಬಟ್ಟಲು ಗೇರು ಹಣ್ಣಿನ ಸಾರವನ್ನು ಎದುರಿಟ್ಟುಕೊಂಡು

 ಒಂದು ಬಟ್ಟಲು ಗೇರು ಹಣ್ಣಿನ ಸಾರವನ್ನು ಎದುರಿಟ್ಟುಕೊಂಡು ಕುಳಿತಿರುವೆ.ಇಳಿಸಲಾಗುತ್ತಿಲ್ಲ.ಅಷ್ಟು ಘಾಟು.
ಇಳಿಸದಿರಲಾಗುವುದೂ ಇಲ್ಲ. ಹಳೆಯದನೆಲ್ಲ ಮರೆತಿರುವೆಯೇನು ಎನ್ನುವಂತೆ ಬಟ್ಟಲು ಎದುರು ಕೂತಿದೆ.ಒಮ್ಮೆ ಒಂದು ಸ್ವಪ್ನದಂತೆ,ಒಮ್ಮೆ ಒಂದು ಪ್ರಪಾತದಂತೆ,ಒಮ್ಮೆ ಹೆಂಗಸೊಬ್ಬಳ ದೀರ್ಘ ನಿಟ್ಟುಸಿರಂತೆ,ಒಮ್ಮೆ ತರಳೆಯೊಬ್ಬಳ ಬೆರಳು ಕಚ್ಚಿದ ನಾಚಿಕೆಯಂತೆ ಮೈಯೆಲ್ಲ ಹರಿದಾಡುವ ಮದ್ಯಸಾರ. ನಿನ್ನನ್ನುಹೇಗೆ ಸೇವಿಸದಿರಲಿ ಎಂದು ದಿಟ್ಟಿಸುತ್ತೇನೆ.
 ನಾನು ಪ್ರೀತಿಸಿದ ಹುಡುಗಿಯನ್ನು ಒಂದು ದೇವತೆಯ ಚಿತ್ರದ ಎದುರು ನಿಂತು ಮದುವೆ ಮಾಡಿಕೊಂಡು ಅವಳ ಹೆತ್ತವರು ಒಡಹುಟ್ಟಿದವರಿಂದ ತಲೆಮರೆಸಿಕೊಂಡು ಅದರ ನಡುವೆ ರೇಷನ್ ಕಾರ್ಡ್ ಬೇರೆ ಮಾಡಿಸ ಬೇಕಾಗಿ ಬಂದು ಸಣ್ಣ ವಯಸ್ಸಿನವನಾದ [...]

ಎಸ್. ಮನೋರಮಾ ಅವರು ಕಳ್ಳನನ್ನು ಹಿಡಿದ ಕಥೆ

ಚತುರ ಗೆರಿಲ್ಲಾ ಹೋರಾಟಗಾರನ ಹಾಗೆ ಮೈಸೂರಿನ ಒಂದೊಂದು ರಸ್ತೆಯ ಮೇಲೆ ಒಂದೊಂದು ಸಂಜೆ ದಾಳಿ ನಡೆಸಿ ಸಾಲುಮರಗಳ ಸೊಂಟ ಮುರಿಯುತ್ತಿರುವ ಹಠಾತ್ ಮಳೆ. ರೆಂಬೆ ಕೊಂಬೆಗಳನ್ನು ಹೂವಿನ ಸಮೇತ ಕಳೆದುಕೊಂಡು ಆಕ್ರಂದಿಸುತ್ತಿರುವ ಗುಲ್ಮೊಹರ್ ಮರಗಳು. ಈ ಆಕ್ರಮಣದ ನಡುವೆ ಹೊಂಚು ಹಾಕಿಕೊಂಡು ಹೋಗಿ ಹಳೆಯ ಕಾಲದ ಮನೆಯೊಂದರಳಗೆ ಕುಳಿತು ನಾನು ಎಸ್. ಸಾವಿತ್ರಮ್ಮನವರು ಹಾಡುತ್ತಿರುವ ಹಳೆಯ ಹಾಡುಗಳನ್ನು ಕೇಳಿಸಿಕೊಳ್ಳುತ್ತಿದ್ದೆ. ಮೈಸೂರಿನ ಪುರಾತನ ಎಲ್.ಎಂ.ಪಿ. ಡಾಕ್ಟರ್ ಶ್ರೀಕಂಠಯ್ಯನವರ ಮುದ್ದಿನ ಮಗಳು ಎಸ್. ಸಾವಿತ್ರಮ್ಮ  `come on come on [...]