ರೈನರ್ ಮರಿಯಾ ರಿಲ್ಕನ ಒಂದು ಸುನೀತ
Posted on Tuesday July 3, 2007 by Rasheed

ಶರತ್ತಿನ ಒಂದು ದಿನ
ಪ್ರಭುವೇ, ಇದೀಗ ಸಮಯ:
ಕಳೆಯುತ್ತಿದೆ ಬೇಸಗೆಯ ಹೊತ್ತು;
ನಿನ್ನ ನೆರಳಿಂದ ಸೂರ್ಯನ ಕಣ್ಣಾಲಿಗಳನ್ನು ಮುಚ್ಚು.
ಹಸಿರ ಬಯಲುಗಳಲ್ಲಿ ಗಾಳಿ ತೇಲಿಹೋಗಲು ಅನುವು ಮಾಡಿಕೊಡು,
ಹಣ್ಣುಗಳನ್ನು ತುಂಬಿಕೊಳ್ಳಲು ಹೇಳು ಮರಗಳಲ್ಲಿ,ಬಳ್ಳಿಗಳಲ್ಲಿ
ಅವುಗಳಿಗಿನ್ನೂ ಕೊಂಚ ಬೆಚ್ಚನೆಯ ಸ್ವಚ್ಚ ಹಗಲುಗಳನ್ನು ದಯಪಾಲಿಸು.
ಹೇಳು ಮೈ ತುಂಬಿಕೊಳ್ಳಲು, ಹಿಂಡಿ ಇಳಿಸು ಸಿಹಿಯನ್ನು
ಅವುಗಳೊಳಗೆ.
ಈ ಹೊತ್ತು ಇರಲು ನೆಲೆ ಯಾರಿಗಿಲ್ಲವೋ ಇನ್ನು ಎಂದೂ ಇರುವುದಿಲ್ಲ
ಈಗ ಒಂಟಿಯಾದವನು ಇನ್ನೆಂದಿಗೂ ಒಂಟಿ
ಕೂರುವನು,ಓದುವನು, ದೀರ್ಘ ಪತ್ರಗಳ ಬರೆಯುವನು ಸಂಜೆಯೆಲ್ಲಾ
ಸಾಲುಮರಗಳ ದಾರಿಯಲಿ ನಡೆಯುವನು ಒಣ
ಎಲೆಗಳು ಹಾರುವವು ವ್ಯಗ್ರವಾಗಿ.
Filed under: ಅನುವಾದಗಳು
ಪ್ರಿಯ ರಶೀದ್,
“ಈಗ ಒಂಟಿಯಾದವನು ಇನ್ನೆಂದಿಗೂ ಒಂಟಿ…” ಎಂತ ಗಾಢ ಭಾವ!
ಅವುಗಳಿಗಿನ್ನೂ ಕೊಂಚ ಬೆಚ್ಚನೆಯ ಸ್ವಚ್ಚ ಹಗಲುಗಳನ್ನು ದಯಪಾಲಿಸು… ಎಷ್ಟೊಂದು ಒಳ್ಳೆಯತನ!
ತುಂಬ ಇಷ್ಟವಾಯಿತು ಕವಿತೆ. ಚನಾಆಆಆಆಆಗಿದೆ.