ನಾಳೆಯಿಂದ ಒಂದು ಹೊಸ ಹೂವಿನ ಹೆಸರು

ಪ್ರಿಯರೇ, 
ಈ ತನಕದ ಹುಡುಗಾಟ, ಆಲಸ್ಯ, ಸುಖಾಸುಮ್ಮನೆ ತಿರುಗಾಟ-ಎಲ್ಲವೂ ಸಖತ್ ಚೆನ್ನಾಗಿದ್ದವು ನಿಜ.
ನಾಳೆಯಿಂದ ಈ ಎಲ್ಲದಕ್ಕೆ ಒಂದು ರೂಪ, ಒಂದು ಆಕಾರ ಬರುತ್ತಿದೆ.
- ಅದೂ ಒಂದು ಹೂವಿನ ಹೆಸರಿನ ರೂಪದಲ್ಲಿ.
ಇದು ನಾವು ಕಂಡಿರುವ ಒಂದು ದೊಡ್ಡ ಕನಸಿನ ಸಣ್ಣದೊಂದು ತುಣುಕು ಮಾತ್ರ.
ಕನ್ನಡ ನಾಡಿನ ಕನ್ನಡ ನುಡಿಯ ಕನ್ನಡ ನೆಲದ ಬದುಕಿನ ಕುರಿತು, ಬದುಕಿನ ಉಲ್ಲಾಸದ ಕುರಿತು, ಬದುಕಿನ ನೂರಾರು ಸಾಧ್ಯತೆಗಳ ಕುರಿತು- ಇಲ್ಲಿನ ಸೌಂದರ್ಯ,ಗೋಳು,ಕವಿತೆ,ಬಾಳು,ಇತಿಹಾಸ,ನೆನಪು,ಹಾಡು,ಕಷ್ಟ ಕೋಟಲೆಗಳ ಕುರಿತು..
ಬೇರೇನೂ ಅಲ್ಲ. ಒಂದು ಅಂತರ್ಜಾಲ ತಾಣ ತರಬೇಕು ಎಂದು ಕನಸು ಕಂಡಿದ್ದೆವು.
ಅದರ [...]

ಒಂದು ಶುಕ್ರವಾರದ ಬೆಳಗು

ಶುಕ್ರವಾರದ ಬೆಳಗು ಹೂವಂತೆ ಹಗುರಾಗಿದೆ.ರಾತ್ರಿ ಹಾಜರಾಗಿ ಅತ್ತು  ಹಂಗಿಸಿ ಕಿರಿಕಿರಿ ಮಾಡಿ ನಾನು ಬದುಕಿರುವುದೇ ತಪ್ಪು ಎನ್ನುವಂತೆ ಶಪಿಸಿ ನಟಿಕೆ ಮುರಿದು ಕೊನೆಗೆ ಹೋಗುವಾಗ ಕರುಣೆಯಿಂದ ಒಮ್ಮೆ ನೋಡಿ
ನಕ್ಕು ಹೋದ ಪ್ರತಿಮೆಗಳಂತಹ ಕಥಾ ಪಾತ್ರಗಳು ಈ ಬೆಳ್ಳನೆಯ ಬೆಳಗಿನಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳಲು ನಾಚಿಕೊಂಡು ಸುಮ್ಮಗಿವೆ.ನಾನಾದರೋ ಹಿಂದೆ ಎಂದೂ ಇಲ್ಲದ ಹಾಗೆ ಇಂದು ಆಹ್ಲಾದಕರವಾಗಿರಬೇಕು ಎಂದುಕೊಂಡು ಕನಸು ಕಾಣುತ್ತಿದ್ದೇನೆ.ನಖಗಳನ್ನು ಕಡಿಯುತ್ತಿದ್ದೇನೆ. ಅವಳು ಹಾಸಿಗೆಯಲ್ಲಿ ಮಲಗಿಕೊಂಡು ಅಲ್ಲೇ ಹೊರಳಾಡುತ್ತಾ,ಚಲಿಸುವ ಕಣ್ಣುಗಳಿಂದಲೇ ಸಮಸ್ತ ಮನೆಯನ್ನೂ, ಮಕ್ಕಳನ್ನೂ, ಆಗಾಗ ಕೊಕ್ಕರಿಸುತ್ತ ಒಳಬಂದು ಹಿಕ್ಕೆ ಹಾಕಿ [...]

ಒಂದು ದಶಕದ ಹಿಂದಿನ ಒಂದು ಪ್ರಬಂದ…..

 ಯಾಕೆ ಈ ಪ್ರೇಮದ ಜೀವಕೆ ಸಾವಿನ ಚಿಂತೆ…..

  ಪುಟ್ಟ ಹುಡುಗಿಯಾಗಿದ್ದ ಈ ಚಂದದ ಹುಡುಗಿ ಈಗ ದೊಡ್ಡವಳಾದ ಮೇಲೂ ಮರೆಯದೆ ಸುಂದರವಾದ ರಾಖಿಯೊಂದನ್ನು ಅಂಚೆಯಲ್ಲಿ ಕಳುಹಿಸಿದ್ದಾಳೆ. ಪತ್ರದಲ್ಲಿ ಏನು ಏನೆಲ್ಲ ಹುಚ್ಚು ಹುಚ್ಚಾಗಿ ಮೊದ್ದು ಮೊದ್ದಾಗಿ ತುಂಟತನದಿಂದ ಬರೆದಿದ್ದಾಳೆ. ಅವಳು ಕಳುಹಿಸಿದ ಈ ಪಂಚವರ್ಣದ ರಾಖಿ ಮಳೆಯಲ್ಲಿ ನೆನೆದು ಬಿಸಿಲಲ್ಲಿ ಒಣಗಿ ಕೈಯ ಮೊಣಗಂಟಿನ ಬಳಿಯಲ್ಲಿ ವಿಚಿತ್ರವಾದ ಚಿತ್ರಗಳನ್ನು ಮೂಡಿಸಿದೆ. ನಾನು ಇವಳ ವೈಖರಿಯ ಕುರಿತು ಯೋಚಿಸುತ್ತಿದ್ದೇನೆ. ಚಂದದ ಪುಟ್ಟ ಹುಡುಗಿಯಾಗಿದ್ದ ಇವಳು ಬೆಳೆದು ಪುಟ್ಟ ಹೆಂಗಸಾಗಿರುವುದು [...]

ಮಾರ್ಕ್ವೆಜ್ ಬದುಕಿ ಉಳಿಯಲಿ ದೇವರೇ…

ಈಗಲೂ ಬರೆಯಲಿಕ್ಕಾಗಿಯೇ ಬದುಕಿರುವ ಈ ಶತಮಾನದ ಅದ್ಭುತ ಕಥೆಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್.ಇನ್ನೂ ಉಳಿದಿರುವ ಕಥೆಗಳನ್ನು ಹೇಳಿ ಮುಗಿಸಲಿಕ್ಕಾಗಿಯೇ ಬದುಕಿ ಉಳಿದಿದ್ದಾನೆ. ಆತನ ಆತ್ಮ ಚರಿತ್ರೆಯ ಉಳಿದಿರುವ ಎರಡು ಸಂಪುಟಗಳನ್ನು ಬರೆದ ನಂತರವೂ ಆತ ಬದುಕಿರಲಿ ಎಂದು ನಾನೂ ಪ್ರಾರ್ಥಿಸುತ್ತಿದ್ದೇನೆ.

ಅಂತ್ಯಸಂಸ್ಕಾರ ಮತ್ತು ಭೂಮಿ ವ್ಯವಹಾರ

ಆಮಿತಾತ ತೀರಿಹೋಗುವ ದಿನದವರೆಗೂ ತನಗೆ ಕಾಫಿತೋಟವೊ೦ದರ ಅರ್ಧಪಾಲು ಸಿಗುವುದು ಎಂದು ನಂಬಿಕೊಂಡು ಬದುಕಿದ್ದಳು.ನೂರಾರು ವರ್ಷಗಳ ಹಿಂದೆ ಬ್ರಿಟಿಶ್ ದೊರೆಯೊಬ್ಬ ಆಕೆಗೆ ಈ ಆಸೆ ಕೊಟ್ಟು ಕೊಡಗಿಗೆ ಕರೆದು ಕೊಂಡು ಬಂದನಂತೆ. ಆ ತೋಟ ಹಲವು ಸಾಹುಕಾರರ ಕೈದಾಟಿದ್ದರೂ ಆ ಪಾಲು ತನಗೆ ಸಿಗುವುದು ಎಂದು ಆಕೆ ನಂಬಿದ್ದಳು.ಅದರಲ್ಲಿ ಒಂದು ಪಾಲು ನನಗೂ ನೀಡುವುದಾಗಿ ಆಕೆ ಆಸೆ ಕೊಟ್ಟಿದ್ದಳು. ಇಂದು ಆಮಿತಾತ ತೀರಿಹೋಗುವವರೆಗೆ ನನಗೂ ಆ ನಂಬಿಕೆ ಇತ್ತು. ಇನ್ನು ಇಲ್ಲ.