Posted on Monday December 31, 2007 by Rasheed
ಪ್ರಿಯರೇ,
ಈ ತನಕದ ಹುಡುಗಾಟ, ಆಲಸ್ಯ, ಸುಖಾಸುಮ್ಮನೆ ತಿರುಗಾಟ-ಎಲ್ಲವೂ ಸಖತ್ ಚೆನ್ನಾಗಿದ್ದವು ನಿಜ.
ನಾಳೆಯಿಂದ ಈ ಎಲ್ಲದಕ್ಕೆ ಒಂದು ರೂಪ, ಒಂದು ಆಕಾರ ಬರುತ್ತಿದೆ.
- ಅದೂ ಒಂದು ಹೂವಿನ ಹೆಸರಿನ ರೂಪದಲ್ಲಿ.
ಇದು ನಾವು ಕಂಡಿರುವ ಒಂದು ದೊಡ್ಡ ಕನಸಿನ ಸಣ್ಣದೊಂದು ತುಣುಕು ಮಾತ್ರ.
ಕನ್ನಡ ನಾಡಿನ ಕನ್ನಡ ನುಡಿಯ ಕನ್ನಡ ನೆಲದ ಬದುಕಿನ ಕುರಿತು, ಬದುಕಿನ ಉಲ್ಲಾಸದ ಕುರಿತು, ಬದುಕಿನ ನೂರಾರು ಸಾಧ್ಯತೆಗಳ ಕುರಿತು- ಇಲ್ಲಿನ ಸೌಂದರ್ಯ,ಗೋಳು,ಕವಿತೆ,ಬಾಳು,ಇತಿಹಾಸ,ನೆನಪು,ಹಾಡು,ಕಷ್ಟ ಕೋಟಲೆಗಳ ಕುರಿತು..
ಬೇರೇನೂ ಅಲ್ಲ. ಒಂದು ಅಂತರ್ಜಾಲ ತಾಣ ತರಬೇಕು ಎಂದು ಕನಸು ಕಂಡಿದ್ದೆವು.
ಅದರ [...]
Filed under: Blogroll, Friends, ಅನುವಾದಗಳು, ಅಲೆಮಾರಿಯ ದಿನಚರಿ, ಈ ತಾಣ ಎಲ್ಲಿ ಬಲ್ಲಿರೇನ, ಕತೆ-ಗಿತೆ, ತೇಜಸ್ವಿ, ಪ್ರಬಂಧ, ಮಾತಿಗೂ ಆಚೆ, ಮುಖಚಿತ್ರ, ಮೈಸೂರಿನಿಂದ ಅಂಕಣ, ಮೋಹಿತನ ಕವಿತೆಗಳು, ರೂಮಿ, ಷಿಲ್ಲಾಂಗಿನಿಂದ ಲಂಕೇಶ, ಹಾಡು-ಪಾಡು, ಹೂವಿನಕೊಲ್ಲಿ | 5 Comments »
Posted on Sunday November 18, 2007 by Rasheed
ಹಲವು ವರ್ಷಗಳ ಹಿಂದೆ ಮಂಗಳೂರಿನ ಬಳಿ ಐದು ಮಂದಿ ಬಾಲಕಿಯರು ಕೊಳದಲ್ಲಿದೋಣಿ ಮಗುಚಿ ನೀರಲ್ಲಿ ಮುಳುಗಿ ತೀರಿಹೋದರು. ನಾನು ಅವರಲ್ಲಿ ಇಬ್ಬರ ಮೃತದೇಹವನ್ನು ಆಸ್ಪತ್ರೆಯ ಶವ ಕೊಠಡಿಯಲ್ಲಿ ನೋಡಿ ಬಂದಿದ್ದೆ. ಮೂಲೆಯಲ್ಲಿ ಇನ್ನೊಬ್ಬ ಗಂಡಸಿನ ಮೃತ ದೇಹವೂ ಇತ್ತು. ಆತ ಮಧ್ಯಾಹ್ನ ಹನ್ನೆರಡು ಗಂಟೆಗೆ ಮನೆಯಲ್ಲಿ ಬಾಗಿಲು ಮುಂದೆ ಮಾಡಿಕೊಂಡು ಉಣ್ಣುತ್ತಾ ಇದ್ದನಂತೆ. ಮುಳುಗಿ ಹೋಗುತ್ತಿರುವ ಬಾಲಕಿಯರು ಕೂಗಿಕೊಳ್ಳುವುದು ಕೇಳಿಸಿಕೊಂಡವನಂತೆ ಉಣ್ಣುತ್ತಿದ್ದಲ್ಲಿಂದ ಹಾರಿ ಎದ್ದು ಕೆರೆಯ ಕಡೆಗೆ ಓಡಿ ನೀರಿಗೆ ಹಾರಿ ತೀರಿಕೊಂಡುಬಿಟ್ಟ. ಅವನಿಗೆ ತುಂಬಾ ಚೆನ್ನಾಗಿ [...]
Filed under: ಮಾತಿಗೂ ಆಚೆ | 2 Comments »
Posted on Thursday August 9, 2007 by Rasheed
ಎಷ್ಟು ಬರೆಯಬೇಕೆಂದು ಕುಳಿತರೂ ಏನೂ ಬರೆಯಲಾಗುತ್ತಲೇ ಇಲ್ಲ. ಇಷ್ಟು ಹೊತ್ತಾದರೂ ಬೆಳಗು ಇನ್ನೂ ದಿಕ್ಕೆಟ್ಟು ಮಲಗಿರುವಂತೆ ಕಾಣಿಸುತ್ತಿದೆ. ಯಾವಾಗಲೂ ಎದ್ದೊಡನೆ ಕಾಣಿಸುತ್ತಿದ್ದ ಅರಬೀ ಕಡಲಿನ ಒಂದು ಚೂರು ನೀಲಿ ಇನ್ನೂ ಮಂಜಿನಲ್ಲೇ ಮಲಗಿಕೊಂಡಿದೆ. ನದಿ ದಾಟುತ್ತಿರುವ ಕಾಡಾನೆಯಂತೆ ಉದ್ದದ ಹಡಗೊಂದು ನದೀ ಮುಖವಾಗಿ ಬಂದರಿನ ಕಡೆಗೆ ನಿಧಾನಕ್ಕೆ ನಿಂತುಕೊಂಡೇ ಇರುವಂತೆ ಚಲಿಸುತ್ತಿದೆ. ನಿಂತೇ ಹೋಗಿದ್ದ ಮುಂಗಾರು ಮಳೆ ಇದೀಗ ನೋಡಿದರೆ ಬೆಳಿಗ್ಗೆಯೇ ಬೆಳಕನ್ನು ನುಂಗಿಕೊಂಡು ಮೋಡವಾಗಿ, ಕಾವಳವಾಗಿ ಆಕಾಶದಲ್ಲಿ ಹಾಗೇ ನಿಂತುಕೊಂಡಿದೆ. ನಿಂತ ಗಾಳಿ, ನಿಂತ ಆಕಾಶ [...]
Filed under: ಮಾತಿಗೂ ಆಚೆ | 1 Comment »
Posted on Friday August 3, 2007 by Rasheed
ಮಂಗಳೂರಿನ ಮಳೆಗೆ ಬೇಜಾರು ಬಂದು ಹೋಗಿ, ರಜೆ ಹಾಕಿ ಬಸ್ಸಿನಲ್ಲಿ ಕುಳಿತು, ಮಳೆಯ ಮಂಗಳೂರನ್ನು ದಾಟಿ, ಮಳೆ ಬೀಳುತ್ತಲೇ ಇರುವ ಕೊಡಗನ್ನು ದಾಟಿ, ಮಳೆಯ ಮೋಡ ಗುಮ್ಮನ ಹಾಗೆ ಸುಮ್ಮನೇ ನಿಂತಿರುವ ಮೈಸೂರಿನಲ್ಲಿ ಬೆಚ್ಚಗೆ ಹೊದ್ದುಕೊಂಡು ಕೈಗೆ ಸಿಕ್ಕಿದ ಪೇಪರುಗಳನ್ನೆಲ್ಲ ನಿರುಕಿಸುತ್ತ ಕೂತಿದ್ದೆ.
ಹುಬ್ಬು ಗಂಟು ಮಾಡಿಕೊಂಡು ಕಣ್ಣುಗಳನ್ನು ಕಿರಿದುಗೊಳಿಸಿ ನೆತ್ತಿಯನ್ನೆಲ್ಲ ನೆರಿಗೆ ಮಾಡಿಕೊಂಡು ಪೇಪರುಗಳನ್ನು ತಿನ್ನುವ ಹಾಗೆ ಓದುವುದು ನನಗೆ ಸಣ್ಣದಿರುವಾಗಿನಿಂದಲೇ ಬೆಳೆದು ಬಂದಿರುವ ಕೆಟ್ಟಚಾಳಿ. ಈ ಕೆಟ್ಟಚಾಳಿಯಿಂದಲೇ ನಾನು ಹಾಳಾಗಿರುವುನೆಂದೂ, ತಲೆ ಬೇನೆ ಬಂದು ನರಳುವುದೆಂದೂ, [...]
Filed under: ಮಾತಿಗೂ ಆಚೆ | 6 Comments »
Posted on Monday July 30, 2007 by Rasheed
[೧೯೯೫ ರಲ್ಲಿ ಬರೆದದ್ದು]
ಆಗ ನಾವು ಹುಡುಗರು.
ಹೈಸ್ಕೂಲಿನ ನಡುವಿನ ಕಾಲ.
ಸಿಕ್ಕ ಸಿಕ್ಕ ಚಂದಮಾಮ. ಬಾಲಮಿತ್ರಗಳನ್ನೂ ಕಾಡಿ,ಬೇಡಿ. ಕಡತಂದು,ಓದಿ ಮುಗಿಸಿ, ಫ್ಯಾಂಟಮ್, ಶೂಜಾ, ಮಜನೂ, ಶೂರಿಗಳು ಇನ್ನೊಂದು ಕಂತಿನಲ್ಲಿ ಏನು ಸಾಹಸ ಮಾಡುವರು ಎಂದು ಊಹಿಸಿ ಕಾದು ಕುಳಿತು ಮೊಣಕಾಲುಗಳ ನಡುವೆ ಅವರ ಚಿತ್ರಗಳನ್ನಿಟ್ಟುಕೊಂಡು ಕುಕ್ಕರಗಾಲ್ಲಲ್ಲೇ ನೋಡಿ ಮುಗಿಸಿ ಇನ್ನೇನು ಇನ್ನೇನು ಎಂದು ತಲ್ಲಣಗೊಳ್ಳುತ್ತಿದ್ದ ದಿನಗಳು.
ಎಲ್ಲವೂ ಬೇಕಾಗಿತ್ತು. ಏನೂ ಬೇಡವಾಗುತ್ತಿತ್ತು. ಜೊತೆಯಲ್ಲಿ ಓದುತ್ತಿದ್ದ ಹುಡುಗಿಯರೂ ಬೆಳೆದು ಅವರ ಆಕಾರಗಳು ಬದಲುಗೊಂಡು ನಾವು ಬೆಳೆಯುತ್ತ ಉಟ್ಟ ಅಂಗಿಚಡ್ಡಿ ಬಿಗಿಯುತ್ತ ಇನ್ನೂ ಚಡ್ಡಿ [...]
Filed under: ಮಾತಿಗೂ ಆಚೆ | 1 Comment »
Posted on Tuesday July 24, 2007 by Rasheed
ಈ ವಾರದಲ್ಲಿ ಪುಟ್ಟ ಹುಡಗರಿಬ್ಬರ ಭಾವಚಿತ್ರಗಳಿರುವ ಜಾಹೀರಾತುಗಳೆರಡು ಪತ್ರಿಕೆಯೊಂದರ ಮೂಲೆಯಲ್ಲಿ ಬಂತು. ಹುಟ್ಟುಹಬ್ಬ, ವಿವಾಹ, ವಿವಾಹ ವಾರ್ಷಿಕ, ವಿಧೇಶ ಪ್ರವಾಸ ಇತ್ಯಾದಿಗಳಿಗೆ ಸಂತೋಷ ಸೂಚಿಸಿ ಬರುವ ಜಾಹೀರಾತುಗಳನ್ನೂ, ಮರಣ ವಾರ್ಷಿಕ ಇತ್ಯಾದಿಗಳಿಗೆ ಕಂಬನಿಯಿಡುವ ಶ್ರದ್ಧಾಂಜಲಿಗಳನ್ನೂ ನೋಡಿ ಈ ಚಿತ್ರಗಳ ಜೊತೆ ಸಂತೋಷವನ್ನೋ, ಬೇಸರವನ್ನೋ ಹಂಚಿಕೊಳ್ಳುವ ನನಗೆ ಈ ಹುಡುಗರ ಚಿತ್ರವನ್ನೂ, ಅದರ ಕೆಳಗೆ ಬರೆದಿರುವ ಅಕ್ಷರಗಳನ್ನೂ ಓದಿ ಸಂತೋಷ ಪಡಬೇಕೋ, ಬೇಜಾರುಮಾಡಿಕೊಳ್ಳಬೇಕೋ ಗೊತ್ತಾಗಲಿಲ್ಲ. ಈ ಹುಡುಗರಿಬ್ಬರೂ ಎರಡು ಪುಟ್ಟ ಶಾಲೆಗಳ, ಪುಟ್ಟ ಚುನಾವಣೆಯಲ್ಲಿ ಗೆದ್ದು ಬಂದ ಶಾಲಾ [...]
Filed under: ಮಾತಿಗೂ ಆಚೆ | 9 Comments »
Posted on Thursday July 19, 2007 by Rasheed
ಈ ಮಳೆ ಚಳಿಗಾಳಿಯ ನಡುವೆ ತೀರಿಹೋದ ಒಂದು ಗಂಡಸು-ಒಂದು ಹೆಂಗಸು, ಅಥವಾ ಒಬ್ಬಳು ಮುದುಕಿ-ಒಬ್ಬ ಮುದುಕ ಅಥವಾ ಇಬ್ಬರನ್ನೂ ಸೇರಿಸಿದರೆ- ತೀರಿ ಹೋದ ಎರಡು ಜೀವಗಳು.
ನಾವು ಹೇಗೆ ಕರೆದರೂ ಸಿಟ್ಟುಮಾಡಿಕೊಳ್ಳದೆ, ಗೊಣಗದೆ ಇವರಿಬ್ಬರೂ ತಮ್ಮ ಪ್ರತ್ಯೇಕ ಗೋರಿಗಳಲ್ಲಿ ಮಣ್ಣಲ್ಲಿ ಮಣ್ಣಾಗಿ ಮಲಗಿದ್ದಾರೆ. ಹಾಗೆ ನೋಡಿದರೆ ಈ ಇಬ್ಬರು ಒಬ್ಬರನೊಬ್ಬರು ನೋಡಿಯೇ ಇಲ್ಲ. ಒಬ್ಬರು ಬದುಕಿದ್ದದು ಇನ್ನೊಬ್ಬರಿಗೆ ತಿಳಿದೂ ಇಲ್ಲ. ಇವರ ಧರ್ಮಗಳು, ಇವರ ಧರ್ಮಗ್ರಂಥಗಳು, ಇವರಿಬ್ಬರ ದೇವರುಗಳು, ಇವರು ನಂಬಿಕೊಂಡ ಸ್ವರ್ಗ ನರಕಗಳು ಬೇರೆ ಬೇರೆಯೇ ಆಗಿವೆ. [...]
Filed under: ಮಾತಿಗೂ ಆಚೆ | No Comments »
Posted on Monday June 25, 2007 by Rasheed
ಮಧ್ಯಾಹ್ನ ಹಠಹಿಡಿದು ಊಟ ಮಾಡದೆ ನಿದ್ದೆ ಹೋಗಿ ಎದ್ದರೆ ಕತ್ತಲಾಗುತ್ತಿತ್ತು. ಮನೆಯೊಳಗೆ ಸಂಜೆಯ ಕೊಂಚ ಬೆಳಕು ಇನ್ನೂ ಉಳಿದು ಅದೂ ಹೊರಟು ಹೋಗಲು ಹವಣಿಸುತ್ತಿತ್ತು. ಈ ಸಂಜೆಯ ಬೆಳಕು ಪ್ರೀತಿಯಂತೆ. ಆದರೆ ಅದೂ ನನ್ನನ್ನು ಬಿಟ್ಟು ಹೋಗಲು ರೆಡಿಯಾಗಿರುವುದನ್ನು ಕಂಡು ಸಂಕಟವಾಗುತ್ತಿತ್ತು. ಎಲ್ಲರ ಮೇಲೆ ಇಡೀ ಪ್ರಪಂಚದ ಕುರಿತೇ ರೇಜಿಗೆಯಾಗುವಷ್ಟು ಹಸಿವು. ಇಡೀ ಮನಸ್ಸನ್ನೇ ಇಡಿ ಇಡಿಯಾಗಿ ತಿಂದು ಬಿಡುವ ಈ ಹಸಿವು! ಮನುಷ್ಯರ ಕೆಟ್ಟ ಹಠ! ಕದ್ದು ಹೋಗಲು ನೋಡುತ್ತಿರುವ ಈ ಚಂದದ ಬೆಳಕು! ಯಾರೂ [...]
Filed under: ಮಾತಿಗೂ ಆಚೆ | 2 Comments »
Posted on Thursday June 21, 2007 by Rasheed
ಸಂಪಾಜೆಯ ಬಳಿಯ ಕೊಯನಾಡಿನ ಅಂದುಕಾಕನ ಮಸಿ ಹಿಡಿದ ಹೋಟೆಲಿನ ಅಡ್ಡಾದಿಡ್ಡಿ ಬೆಂಚುಗಳಲ್ಲಿ ಕೂತ ನಾವು ತಿಂಡಿ ಕಪಾಟಿನ ಮೇಲಿಟ್ಟಿದ್ದ ಹೊಗೆ ಬಣ್ಣದ ರೇಡಿಯೋ ಒಂದರಿಂದ ವಿಚಿತ್ರ ಸ್ವರದ ರಷ್ಯನ್ ಹೆಂಗಸಿನ ಗಂಟಲಿನಿಂದ ನಮ್ಮ ಹೆಸರುಗಳನ್ನು ಕೇಳಿಸಿಕೊಳ್ಳುತ್ತಿದ್ದೆವು. ಅವಳ ವಿಚಿತ್ರ ಕನ್ನಡದಲ್ಲಿ ನಮ್ಮ ಹೆಸರುಗಳು ಗಂಟಲು ಅದುಮಿಸಿಕೊಂಡು, ಮೂಗು ಮುಚ್ಚಿಸಿಕೊಂಡು, ರೊಟ್ಟಿಗೆ ಅಕ್ಕಿಯ ಹಿಟ್ಟು ನಾದುವಂತೆ ನಾದಿಸಿಕೊಂಡು ಅಂದು ಕಾಕನ ತಿಂಡಿಯ ಪರಿಮಳ ತುಂಬಿದ ಹೋಟೇಲಿನೊಳಗೆ ಸಂಜೆಯ ಬಿಸಿಲು ಕೋಲಿನ ಹಾಗೆ ಬಂದು ಕೇಳುತ್ತಿತ್ತು. ಅಂದುಕಾಕ ಗಲ್ಲದ ಮೇಲೆ [...]
Filed under: ಮಾತಿಗೂ ಆಚೆ | 5 Comments »
Posted on Saturday June 9, 2007 by Rasheed
ಧ್ಯಾನ, ತಪಸ್ಸು, ಪ್ರೀತಿ ಮತ್ತು ಕೊಂಚ ತಮಾಷೆ
ಈ ತಸ್ಲೀಮಾ ಎಂಬ ಡಾಕ್ಟರ್ ಹೆಣ್ಣು ಮಗಳು, ಬೆಂಗಾಲಿ ಬರಹಗಾರ್ತಿ. ಮೊದಲು ಧರ್ಮಭ್ರಷ್ಟಳಾಗಿ ಈಗ ದೇಶಭ್ರಷ್ಟಳಾಗಿ ತಲೆದಂಡ ವಿಧಿಸಿಕೊಂಡು ದೇಶ ವಿದೇಶಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿರುವುದು ಒಂದು ಪೂರ್ವಯೋಜಿತ ಪ್ರಹಸನದಂತೆ ನಡೆದುಹೋಗಿದೆ. ಆಕೆಗೆ ದೂರದ ದೇಶವೊಂದು ಆಶ್ರಯ ಕೊಟ್ಟಿದೆ. ತಲೆದಂಡ ವಿಧಿಸಿದವರು ಹಲ್ಲು ಕಚ್ಚಿ ಸುಮ್ಮನಾಗಿದ್ದಾರೆ. ತಲೆದಂಡದ ವಿರುದ್ಧ ಮಾತನಾಡಿ ಪ್ರಜ್ಞಾವಂತರಾದ, ಬುದ್ಧಿಜೀವಿಗಳಾದ, ಜಾತ್ಯತೀತರಾದ ಜನ ಕೂಡಾ ಸುಮ್ಮನಾಗಿದ್ದಾರೆ. ಆಕೆಯನ್ನು ಬೈದವರು, ಹೊಗಳಿದವರು ಉಪಯೋಗಿಸಿಕೊಂಡವರು ಎಲ್ಲರೂ ಇಂತಹದೇ ಇನ್ನೊಂದು ಪ್ರಹಸನಕ್ಕಾಗಿ ಕಾಯುತ್ತಾ [...]
Filed under: ಮಾತಿಗೂ ಆಚೆ | 4 Comments »
Posted on Saturday May 26, 2007 by Rasheed
ಸೂಫಿ ಸಂತನ ಸಂಸಾರ ತೋಟ…
ಹುಣ್ಣಿಮೆಯ ಮರುದಿನದ ಬೆಳದಿಂಗಳು. ಆ ದೊಡ್ಡ ಮಸೀದಿ ತೊಯ್ಯುತ್ತ ಮಲಗಿತ್ತು. ಚಂದ್ರನ ಕೆಳಗೆ ಚಂದಕ್ಕೆ ಹಾಸಿದಂತೆ ಒಂದು ತುಂಡು ಮೋಡ ಮುಸುಕಿಕೊಂಡು ಆಕಾಶದ ಅಳಿದುಳಿದ ಕತ್ತಲಿನ ಜಾಗದಲ್ಲಿ ಒಂದೊಂದು ನಕ್ಷತ್ರಗಳು ಮಿನುಗುತ್ತಿದ್ದವು. ಅಲ್ಲಲ್ಲಿ ಮಳೆಯ ಮೋಡಗಳು ನೀಲಿಗಟ್ಟಿಕೊಂಡು ಆ ಹೊತ್ತಲ್ಲಿ ಆ ಆಕಾಶ, ಈ ಭೂಮಿ ಮತ್ತು ಭೂಮಿಯ ಮೇಲಿರುವ ಈ ದೊಡ್ಡ ಮಸೀದಿ.
ನೀನು ಯಾರೆಂದು ಯಾರಾದರೂ ಕೇಳಿದರೆ ನಾನು ಯಾರೆಂದು ಹೇಳಲಿ? ನಿನ್ನ ಹೆತ್ತವರು ಯಾರು, ನಿನ್ನ ಪಡೆದವನು ಯಾರು? ಎಂದು [...]
Filed under: ಮಾತಿಗೂ ಆಚೆ | No Comments »
Posted on Sunday May 20, 2007 by Rasheed
‘ಸುಂದರವಾದ ಈ ಭೂಗೋಳದಲ್ಲಿ ನನಗೆ ಪಡೆದವನು ಅನುಮತಿಸಿದ್ದ ಸಮಯ ಪರಿಪೂರ್ಣವಾಗಿ ಅವಸಾನಿಸಿತು. ಇನ್ನು ಸಮಯ ಕೊಂಚವೂ ಇಲ್ಲ. ಆ ಪಡೆದವನ ಭಂಡಾರದಲ್ಲಿ ಮಾತ್ರ ಸಮಯವಿದೆ. ಎಂದಿಗೂ, ಎಂದೆಂದಿಗೂ ಮುಗಿಯದ ಸಮಯ ಅನಂತ ಅನಂತವಾದ ಸಮಯ’ ‘ನಾನು ತೀರಿಹೋದೆ.. ನನ್ನ ಇನ್ನು ಯಾರಾದರು ನೆನಪಿಸಬೇಕೆ? ನನ್ನ ಯಾರೂ ನೆನಪಿಸುವುದು ಬೇಡ ಎಂದು ನನಗೆ ಅನ್ನಿಸುತ್ತಿದೆ. ಯಾಕೆ ನೆನಪಿಸುವುದು? ಕೋಟ್ಯಾನುಕೋಟಿ ಅನಂತ ಕೋಟಿ ಸ್ತ್ರೀ ಪುರುಷರು ತೀರಿಹೋಗಿಲ್ಲವೇ? ಅವರನ್ನು ಯಾರು ನೆನಪಿಸುತ್ತಾರೆ?’ ‘ನನ್ನ ಪುಸ್ತಕಗಳೆಲ್ಲ ಎಷ್ಟು ಕಾಲ ನೆಲೆ ನಿಲ್ಲಬಹುದು? [...]
Filed under: ಮಾತಿಗೂ ಆಚೆ | 3 Comments »
Posted on Thursday May 17, 2007 by Rasheed
ಪ್ಲೇಗ್ ಮಾರಿಯ ಮೇಲೆ ಮಾನವ ಭಾಷ್ಯ
ಎಂಟು ತಿಂಗಳ ಕಾಲ ಮರಣ ನರ್ತನ ನಡೆಸಿದ ಪ್ಲೇಗ್ ಮಾರಿ ಆಯಾಸಗೊಂಡಂತೆ ನಟಿಸುತ್ತಾ ಹಿಮ್ಮೆಟ್ಟಿದ್ದಾಳೆ. ಮರಣ ಭಯದಲ್ಲಿ ಕಳೆದ ಈ ನಗರ ಇದ್ದಕ್ಕಿದ್ದಂತೆ ಉಲ್ಲಾಸಗೊಳ್ಳುತ್ತಿದೆ. ಹೊರ ಜಗತ್ತಿಗೆ ಮುಚ್ಚಿಕೊಂಡಿದ್ದ ನಗರದ ಬಾಗಿಲುಗಳು ತೆರೆದುಕೊಂಡಿವೆ. ಅಗಲಿ ಇದ್ದವರು ಒಂದಾಗುತ್ತಿದ್ದಾರೆ. ಪ್ರೇಮಿಗಳು, ಗಂಡ-ಹೆಂಡತಿಯರು ತೆರೆದ ತೋಳುಗಳಿಂದ ನಡು ಬೀದಿಯಲ್ಲೇ ಒಬ್ಬರನ್ನೊಬ್ಬರು ಅಪ್ಪಿಕೊಳ್ಳುತ್ತಿದ್ದಾರೆ. ನಿಂತು ಹೋಗಿದ್ದ ರೈಲ್ವೆ ಎಂಜಿನ್ಗಳಿಂದ ಹೊಗೆ ಏಳುತ್ತಿದೆ. ಮುಚ್ಚಿದ್ದ ನಗರದ ಬಂದರಿಗೆ ಹಡಗುಗಳು ಬರತೊಡಗಿವೆ. ಪ್ಲೇಗಿನಿಂದ ಬದುಕಿ ಉಳಿದ ಜನ ಮೈಮರೆತು [...]
Filed under: ಮಾತಿಗೂ ಆಚೆ | 2 Comments »
Posted on Friday May 11, 2007 by Rasheed
ಶ್ರಾವಣದ ಕೊನೆಯ ಶನಿವಾರ ಅಪರಾಹ್ನ. ಕೊತ್ತಂಬರಿ, ಮೆಂತೆ ಸೊಪ್ಪು, ಚೆಂಡು ಹೂ, ಸೇವಂತಿಗೆ. ಕುಂಕುಮ, ಅಗರಬತ್ತಿ ಮತ್ತು ಬೀದಿಯ ತುಂಬ ತಳ್ಳಾಡುತ್ತಾ ಹೆಗಲಿಗೆ ಒರೆಸಿ ಬೆವರುತ್ತ ನಡೆಯುತ್ತಿರುವ ಮಂದಿಯ ಮಿಶ್ರ ಪರಿಮಳ.
ಕಿ.ರಂ ನನ್ನನ್ನು ಬೆಂಗಳೂರಿನ ಕೃಷ್ಣರಾಜ ಮಾರುಕಟ್ಟೆಗೆ ತಾಗಿಕೊಂಡಿರುವ ರಸ್ತೆಗಳಲ್ಲಿ ನಡೆಸುತ್ತಿದ್ದರು. ಎಲ್ಲ ದೇವಾಲಯಗಳೂ, ದೇವ ದೇವತೆಗಳೂ ಹಳದಿಯ ಹೂಗಳಿಂದ ಅಲಂಕೃತಗೊಂಡು ಸಂಜೆಗೆ ಬರುವ ಭಕ್ತರನ್ನು ಕಾಯುತ್ತಿದ್ದವು.. ಈ ದೇವರುಗಳು, ಈ ದೇವತೆಗಳು, ಈ ತಳ್ಳುವ ಜನರು, ಈ ಅಗಾಧ ಮನುಷ್ಯವಾಸನೆ ಮತ್ತು ಹೂವುಗಳ ಪರಿಮಳ. ನಾವು [...]
Filed under: ಮಾತಿಗೂ ಆಚೆ | 4 Comments »
Posted on Monday April 30, 2007 by Rasheed
ಇದು ಹುಡುಗ ಹುಡುಗಿಯರ ಹದಿಹರೆಯದ ಹುಚ್ಚಿನ ಮೋಹಕ ಪ್ರೇಮವಲ್ಲ, ಹೆಣ್ಣು- ಗಂಡಿನ ಉರಿಯುವ ಪ್ರೇಮದ, ಕಾಮದ ನಾಲಗೆಯ ಚಾಚುವಿಕೆಯಲ್ಲ, ಗಂಡಸು ಮತ್ತು ಗಂಡಸಿನ ನಡುವಿನ ಅಥವಾ ಹೆಂಗಸು ಮತ್ತು ಹೆಂಗಸಿನ ನಡುವಿನ ಹೇಳಲೂ ಆಗದ ನುಂಗಲೂ ಆಗದ ಆಕರ್ಷಣೆಯಲ್ಲ.
ಇದು ಇಬ್ಬರು ಮುದುಕರ ಪ್ರೇಮದ ಕಥೆ. ಇಲ್ಲಿ ನಾಯಕರಿಲ್ಲ, ನಾಯಕಿಯರಿಲ್ಲ, ಖಳರಿಲ್ಲ, ವಿರಹವಿಲ್ಲ, ಅಸೂಯೆಯಿಲ್ಲ. ಎಲ್ಲವನ್ನೂ ವಿವರಿಸಿ ಹೇಳುವ ಕಾರ್ಯ ಮತ್ತು ಕಾರಣಗಳೆಂಬ ಸಂಬಂಧಗಳ ಹಂಗೂ ಈ ಮುದುಕರಿಗೆ ಇಲ್ಲ. ಯಾಕೆ ಈ ಪ್ರೇಮ ಎಂದು ಕೇಳಿದರೆ ಇದಕ್ಕೇ [...]
Filed under: ಮಾತಿಗೂ ಆಚೆ | 9 Comments »