Posted on Monday December 31, 2007 by Rasheed
ಪ್ರಿಯರೇ,
ಈ ತನಕದ ಹುಡುಗಾಟ, ಆಲಸ್ಯ, ಸುಖಾಸುಮ್ಮನೆ ತಿರುಗಾಟ-ಎಲ್ಲವೂ ಸಖತ್ ಚೆನ್ನಾಗಿದ್ದವು ನಿಜ.
ನಾಳೆಯಿಂದ ಈ ಎಲ್ಲದಕ್ಕೆ ಒಂದು ರೂಪ, ಒಂದು ಆಕಾರ ಬರುತ್ತಿದೆ.
- ಅದೂ ಒಂದು ಹೂವಿನ ಹೆಸರಿನ ರೂಪದಲ್ಲಿ.
ಇದು ನಾವು ಕಂಡಿರುವ ಒಂದು ದೊಡ್ಡ ಕನಸಿನ ಸಣ್ಣದೊಂದು ತುಣುಕು ಮಾತ್ರ.
ಕನ್ನಡ ನಾಡಿನ ಕನ್ನಡ ನುಡಿಯ ಕನ್ನಡ ನೆಲದ ಬದುಕಿನ ಕುರಿತು, ಬದುಕಿನ ಉಲ್ಲಾಸದ ಕುರಿತು, ಬದುಕಿನ ನೂರಾರು ಸಾಧ್ಯತೆಗಳ ಕುರಿತು- ಇಲ್ಲಿನ ಸೌಂದರ್ಯ,ಗೋಳು,ಕವಿತೆ,ಬಾಳು,ಇತಿಹಾಸ,ನೆನಪು,ಹಾಡು,ಕಷ್ಟ ಕೋಟಲೆಗಳ ಕುರಿತು..
ಬೇರೇನೂ ಅಲ್ಲ. ಒಂದು ಅಂತರ್ಜಾಲ ತಾಣ ತರಬೇಕು ಎಂದು ಕನಸು ಕಂಡಿದ್ದೆವು.
ಅದರ [...]
Filed under: Blogroll, Friends, ಅನುವಾದಗಳು, ಅಲೆಮಾರಿಯ ದಿನಚರಿ, ಈ ತಾಣ ಎಲ್ಲಿ ಬಲ್ಲಿರೇನ, ಕತೆ-ಗಿತೆ, ತೇಜಸ್ವಿ, ಪ್ರಬಂಧ, ಮಾತಿಗೂ ಆಚೆ, ಮುಖಚಿತ್ರ, ಮೈಸೂರಿನಿಂದ ಅಂಕಣ, ಮೋಹಿತನ ಕವಿತೆಗಳು, ರೂಮಿ, ಷಿಲ್ಲಾಂಗಿನಿಂದ ಲಂಕೇಶ, ಹಾಡು-ಪಾಡು, ಹೂವಿನಕೊಲ್ಲಿ | 5 Comments »
Posted on Wednesday October 24, 2007 by Rasheed
ಕುವೆಂಪು ಅವರಿಗೂ ಸೀನಿಯರ್ ಆಗಿದ್ದ ಹಾಸನ ಅಠಾಣಾ ರಾಮಣ್ಣನವರು ೧೦೫ ವರ್ಷ ಬದುಕಿ ನಿನ್ನೆ ರಾತ್ರಿ ಮೈಸೂರಿನಲ್ಲಿ ತೀರಿಹೋದರು.
ಅವರ ಕುರಿತು ಈ ಹಿಂದೆ ಬರೆದ ಬರಹಕ್ಕಾಗಿ ಇಲ್ಲಿ ಓದಿ
Filed under: ಮೈಸೂರಿನಿಂದ ಅಂಕಣ | 2 Comments »
Posted on Monday May 28, 2007 by Rasheed
ನಿನ್ನೆ ಸಂಜೆ ಮೈಸೂರಿನಲ್ಲಿ ಇನ್ನೇನು ಮಳೆ ಸುರಿಯುವ ಹಾಗೆ ಇತ್ತು. ಆದರೆ ಹಾಗೇನೂ ಆಗಲಿಲ್ಲ. ನಾನು ಸುಮಾರು ಎರಡು ಗಂಟೆಗಳ ಹೊತ್ತು ಯೋಗಾಚಾರ್ಯ ನಾಗರಾಜ ಸೂರ್ಯನಾರಾಯಣ ಪಾಂಡೆಯವರ ಬಳಿ ಕಥೆ ಕೇಳುತ್ತಾ ಕುಳಿತಿದ್ದೆ. ಒಂದಂತೂ ನಿಜ. ಇನ್ನು ನೂರಾರು ವರ್ಷಗಳಷ್ಟು ಕಾಲ ಬರೆಯುವಷ್ಟು ವಿಷಯಗಳು ಅವರ ಬಳಿ ಇರುವುದು ಗೊತ್ತಾಯಿತು. ನನಗೆ ಮೈಸೂರಿನಲ್ಲಿ ಮಾತನಾಡಲು, ನನ್ನನ್ನು ಹರಸಲು ಇನ್ನೊಬ್ಬರು ಮಹಾ ಗುರುಗಳು ದೊರಕಿದರು ಎಂಬ ಆನಂದದಿಂದ ಅವರ ಬಳಿಯಿಂದ ಹೊರಟು ಬಂದು ಇದನ್ನು ಬರೆಯುತ್ತಿರುವೆ
ನಾಗರಾಜ ಸೂರ್ಜನಾರಾಯಣ ಪಾಂಡೆಯವರು [...]
Filed under: ಮೈಸೂರಿನಿಂದ ಅಂಕಣ | 5 Comments »
Posted on Monday May 21, 2007 by Rasheed
ನನ್ನ ಪ್ರೀತಿಯ ಬರಹಗಾರ ದಿವಂಗತ ಚದುರಂಗ ಅವರ ನಿಜವಾದ ಹೆಸರು ಎಂ. ಸುಬ್ರಹ್ಮಣ್ಯ ರಾಜೇ ಅರಸ್ ಎಂಬುದು ಬಹಳ ಕಾಲದವರೆಗೆ ನನಗೆ ತಿಳಿದಿರಲಿಲ್ಲ. ಎಂ. ಅಂದರೆ ಮುದ್ದುರಾಜ ಅರಸ್. ಮುದ್ದುರಾಜ ಅರಸರು ಚದುರಂಗರ ತಂದೆ. ಅವರು ತಲಕಾಡಿನ ರಾಜವಂಶಕ್ಕೆ ಸೇರಿದವರು. ತಲಕಾಡು ಮರಳಿನಿಂದ ಮುಚ್ಚಿದಾಗ ಇವರ ಹಿರಿಯರು ಅಲ್ಲಿಂದ ಸಮೀಪದ ಪಾಳ್ಯಕ್ಕೆ ಹೋಗಿ ನೆಲೆಸಿ ಪಾಳ್ಯದ ಚತುರಂಗ ಅರಸು ಮನೆತನದವರು ಅಂತ ಹೆಸರಾದವರು. ಈ ಮನೆತನದ ಅರಸರು ಚದುರಂಗ ಕ್ರೀಡೆಯಲ್ಲಿ ಪ್ರವೀಣರಾಗಿದ್ದರಿಂದ ಇವರಿಗೆ ಆ ಹೆಸರು ವಂಶಪಾರಂಪರ್ಯವಾಗಿ [...]
Filed under: ಮೈಸೂರಿನಿಂದ ಅಂಕಣ | 5 Comments »
Posted on Monday May 14, 2007 by Rasheed
ಈ ಬೈಕಿನ ರಿಮ್ಮು ಒರೆಸುವ ಮರಳು ಗೋಪಾಲನ ಕುರಿತು ಗದ್ಯದಲ್ಲಿ ಬರೆಯುವುದೋ ಪದ್ಯದಲ್ಲಿ ಬರೆಯುವದೋ ಎಂದು ನನಗೆ ಇನ್ನೂ ಗೊತ್ತಾಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಈ ತರಹದ ಸಂದಿಗ್ಧತೆ ಎಂದೂ ಎದುರಾಗಿಯೂ ಇರಲಿಲ್ಲ. ನನ್ನ ಬೈಕಿನ ಬೇರೆ ಎಲ್ಲಾ ಭಾಗಗಳೂ ಕೊಳೆಯಿಂದ ತುಂಬಿದ್ದರೂ ಚಕ್ರಗಳ ನಡುವಿನ ಲೋಹದ ರಿಮ್ಮುಗಳು ಯಾವಾಗಲೂ ಪಳಪಳನೆ ಹೊಳೆಯುತ್ತಿರುವ ಹಿಂದಿನ ಗುಟ್ಟು ಈವತ್ತಿನವರೆಗೆ ನನ್ನ ಹೆಂಡತಿಗೂ ಗೊತ್ತಿರಲಿಲ್ಲ. ಈವತ್ತು ಬರೆಯುವ ಮೊದಲು ಈ ಕುರಿತು ನನ್ನೊಳಗೂ ಇರುವ ಗೊಂದಲಗಳನ್ನು ನಿವಾರಿಸುವ ಸಲುವಾಗಿ ಆಕೆಗೆ ಮರಳು [...]
Filed under: ಮೈಸೂರಿನಿಂದ ಅಂಕಣ | 5 Comments »
Posted on Tuesday April 24, 2007 by Rasheed
ನೋಡಲು ಚೂಟಿಯಾಗಿದ್ದ ಆದರೆ ಓದಲು ಅಷ್ಟೇನೂ ಚುರುಕಾಗಿರದ ನಮ್ಮ ಸಂಬಂಧಿಕರ ಹುಡುಗಿಯೊಬ್ಬಳನ್ನು ಮನೆಯಲ್ಲಿಟ್ಟುಕೊಂಡು ಓದಿಸುತ್ತಿದ್ದೆ. ಎರಡು ವರ್ಷಗಳ ಹಿಂದೆ ಒಂದು ದಿನ ಸಂಜೆ ಎಲ್ಲಿಯೋ ತಿರುಗಾಡಲು ಹೋಗಿದ್ದ ನಾನು ತಿರುಗಿ ಬಂದಾಗ ಕತ್ತಲಾಗುತ್ತಿತ್ತು. ಆ ಹುಡುಗಿಗೆ ಗಂಡು ಹುಡುಕಿಕೊಂಡು ಬಂದ ಮಹಿಳೆಯರೊಬ್ಬರು ನನಗಾಗಿ ಕಾಯುತ್ತಾ ಕುಳಿತಿದ್ದರು. ಗಂಡು ಹುಡುಕುವುದು, ಮದುವೆ ಮಾಡಿಸುವುದು ಇತ್ಯಾದಿಗಳಲ್ಲಿ ಅಷ್ಟೇನೂ ಆಸಕ್ತಿ ಇರದ ನಾನು ಒಂದು ತರಹದ ನಿರಾಸಕ್ತಿಯಿಂದಲೇ ಆಕೆಯನ್ನು ಏನು ಮಾತಾಡಿಸುವುದು ಎಂದು ಯೋಚಿಸುತ್ತಿದ್ದೆ. ಮದುವೆಯ ವಯಸ್ಸೇನೂ ಆಗಿರದಿದ್ದ ಸಂಬಂಧಿಕರ ಹುಡುಗಿ [...]
Filed under: ಮೈಸೂರಿನಿಂದ ಅಂಕಣ | 2 Comments »
Posted on Monday April 16, 2007 by Rasheed
ಮಧ್ಯಾಹ್ನದ ಹೊತ್ತು ನಿದ್ದೆ ಮಾಡುವ ನನ್ನ ಮಗನನ್ನು ನೋಡಿಕೊಳ್ಳಲು ಸಿದ್ಧಮ್ಮ ಎಂಬ ಗಾಣಿಗರ ಅಜ್ಜಿ ಬರುತ್ತಾಳೆ. ಈ ಅಜ್ಜಿಯ ಬೆನ್ನು ಸ್ವಲ್ಪ ಬಾಗಿದೆ. ಸೊಂಟ ಯಾವಾಗಲೂ ಹಿಡಿದುಕೊಂಡಿರುತ್ತದೆ. ಕೀಟಲೆಯಲ್ಲಿ ನನಗಿಂತಲೂ ಒಂದು ಕೈ ಮೇಲೆಯೇ ಇರುವ ನನ್ನ ಮಗ ಒಂದು ಕಣ್ಣು ತೆರೆದುಕೊಂಡು ಇನ್ನೊಂದು ಕಣ್ಣನ್ನು ಮುಚ್ಚಿ ಕಣ್ಣೆದುರು ಕಾಣಿಸುವ ಎಲ್ಲ ಚರಾಚರ ವಸ್ತುಗಳ ಸ್ಪೆಲ್ಲಿಂಗನ್ನು ಹೇಳಿಕೊಂಡು ಕ್ಯಾಟ್ ಅನ್ನುವ ಹೆಸರಲ್ಲಿ ‘ಸಿ’ ಯಾಕೆ ಬೇಕು? ‘ಯು’ ಯಿಂದ ಶುರುವಾಗುವುದಾದರೆ ಕೊಡೆಯನ್ನು ಯುಂಬ್ರೆಲಾ ಎಂದು ಕರೆಯಬೇಕಲ್ಲವೇ ಎಂದೆಲ್ಲಾ [...]
Filed under: ಮೈಸೂರಿನಿಂದ ಅಂಕಣ | 9 Comments »
Posted on Monday April 9, 2007 by Rasheed
[ವ್ಯಂಗ್ಯಚಿತ್ರ ಕೃಪೆ:ಗುಜ್ಜಾರಪ್ಪ]
[...]
Filed under: ಮೈಸೂರಿನಿಂದ ಅಂಕಣ | 9 Comments »
Posted on Monday April 2, 2007 by Rasheed
[photo:Nethraraju]
ಕನ್ನಡನಾಡಿನ ಎಲ್ಲೋ ಒಂದುಕಡೆ ಒಂದು ಕಲ್ಲಿನ ದೇವಾಯವಿದೆಯಂತೆ. ಆ ದೇವಾಲಯದ ಯಾವ ಕಲ್ಲನ್ನು ಮೊಟಕಿದರೂ ಅದರಿಂದ ಸಂಗೀತ ಹೊರಹೊಮ್ಮವುದಂತೆ. ಅದೇ ರೀತಿ ಮೈಸೂರಿನ ಹಳೆಯ ಕಾಲದ ಯಾರನ್ನು ಮಾತನಾಡಿಸಿದರೂ ಅವರಿಂದ ಮಹಾರಾಜರ ಕಥೆಗಳೇ ಹೊರ ಬರುವುದಂತೆ. ಇನ್ನೂ ಸ್ವಲ್ಪ ಕಡಿಮೆ ಹಳಬರನ್ನು ಮಾತನಾಡಿಸಿದರೆ ಅವರಿಂದ ಕುವೆಂಪು ಅವರ ಹೆಸರೇ ಬರುವುದಂತೆ.
`ಇವರಿಬ್ಬರ ಗುಂಗಿನಿಂದ ಹೊರಬಂದು ಬರೆಯುವುದೆಂದರೆ ಮೈಸೂರಿನಲ್ಲಿ ಹರಸಾಹಸದ ಕೆಲಸವೇ ಸರಿ. ಹಾಗಾಗಿ ನೀನು ಯಾಕೆ ಸ್ವಲ್ಪ ನಮ್ಮ ದೇವನೂರು ಮಹಾದೇವರನ್ನು ಮಾತನಾಡಿಸಿ ಬರೆಯಬಾರದು ಎಂದು ಗೆಳೆಯರೊಬ್ಬರು ಕೊಂಚ [...]
Filed under: ಮೈಸೂರಿನಿಂದ ಅಂಕಣ | 3 Comments »
Posted on Tuesday March 27, 2007 by Rasheed
‘ಹಿಂದೂಸ್ತಾನದ [...]
Filed under: ಮೈಸೂರಿನಿಂದ ಅಂಕಣ | No Comments »
Posted on Monday March 19, 2007 by Rasheed
ಒಂದು ಕಾಲದಲ್ಲಿ ಕೊಡಗಿನ ನಮಗೆಲ್ಲರಿಗೂ ಮಹಾರಾಜರಾಗಿದ್ದ ಹಾಲೇರಿ ಅರಸರ ವಂಶದ ಕುಡಿಯೊಡನೆ ವಾದಕೊಡಗಿನ ಅರಸರ ಕುಡಿ ಮಾಡುತ್ತಿರುವ ನನ್ನ ಉದ್ಧಟತನಕ್ಕೆ ನನಗೇ ನಗುಬಂದು ಆ ನಗುವನ್ನು ತೋರಿಸಿಕೊಳ್ಳದೆ ನಾಗರಾಜ ಒಡೆಯರು ಖಾಲಿ ಹಿಟ್ಟಿನ ಚೀಲದೊಳಗೆ ಜತನದಲ್ಲಿ ಇಟ್ಟುಕೊಂಡಿದ್ದ ರಾಜಮನೆತನಕ್ಕೆ ಸಂಬಂಧಿಸಿದ ಅಮೂಲ್ಯ ದಾಖಲಾತಿಗಳನ್ನೂ, ಐತಿಹಾಸಿಕ ಕಾಗದ ಪತ್ರಗಳನ್ನೂ ಎತ್ತಿಕೊಂಡು ಅವುಗಳ ಮೇಲೆ ಹರಡಿದ್ದ ನಾನಾ ಹಿಟ್ಟುಗಳ ಧೂಳುಗಳನ್ನು ಜೋಪಾನವಾಗಿ ಕೊಡವಿ ನೋಡತೊಡಗಿದೆ.
Filed under: ಮೈಸೂರಿನಿಂದ ಅಂಕಣ | 8 Comments »
Posted on Tuesday March 13, 2007 by Rasheed
ಮೈಸೂರಿನ ಕೃಷ್ಣರಾಜ ಆಸ್ಪತ್ರೆಯಿಂದ ಇರ್ವಿನ್ ರಸ್ತೆ ನೆಹರೂ ವೃತ್ತ ವನ್ನು ಸೇರುವ ಮೊದಲು ಎಡಬದಿಯಲ್ಲಿ ರಸ್ತೆಗೆ ತಾಗಿಕೊಂಡಂತಿರುವ ಹಳೆಯ ಶೈಲಿಯ ಈ ಕಟ್ಟಡ ಎಂತಹ ದಾರಿಹೋಕನನ್ನು ಒಮ್ಮೆ ತಿರುಗಿ ನೋಡುವಂತೆ ಮಾಡುತ್ತದೆ. ನೂರಾರು ವರ್ಷಗಳ ಹಿಂದೆ ಕಟ್ಟಿದಾಗ ಹೇಗೆ ಇತ್ತೋ ಇನ್ನೂ ಹಾಗೇ ಇರುವ ಈ ಕಟ್ಟಡದ ಮೇಲುಪ್ಪರಿಗೆಯಲ್ಲಿ ವಿಜಯ ಶಂಖಶುಕ್ತಿ ಕಲಾಕೇಂದ್ರ ಎನ್ನುವ ಹಳೆಯ ನಾಮಫಲಕವೊಂದು ಬಹಳ ವರ್ಷಗಳಿಂದ ತೂಗಾಡುತ್ತಿದೆ.ಕೊಂಚ ಅಸಹಜವಾಗಿ ಇದೆಯಲ್ಲ ಎಂದುಕೊಂಡು ಯಾವಾಗಲೂ ವಾರೆಯಾಗಿ ತೆರೆದುಕೊಂಡಿರುವ ಈ ಕಟ್ಟಡದ ಕೆಳ ಅಂತಸ್ತಿನ [...]
Filed under: ಮೈಸೂರಿನಿಂದ ಅಂಕಣ | 2 Comments »
Posted on Monday March 5, 2007 by Rasheed
ಆ ಸಂಜೆ ನನಗೆ ಇನ್ನೂ ನೆನಪಿದೆ. ಪರದೆ ಇಳಿಬಿಟ್ಟ ಸಣ್ಣಗಿನ ಬೆಳಕಿನ ಇಂತಹದೇ ಆ ಸಂಜೆ ಆ ನಾಲ್ವರು ಸಹೋದರಿಯರು ಒಂದೇ ದನಿಯಲ್ಲಿ ಒಂದೇ ಮನಸ್ಸಿನಲ್ಲಿ ಒಂದೇ ಆತ್ಮ ಹಾಡುತ್ತಿದೆ ಎನ್ನುವ ಹಾಗೆ ಕನ್ನಡದ ಒಂದೊಂದೇ ಹಾಡುಗಳನ್ನು ಮಗುವನ್ನು ಎತ್ತಿಕೊಳ್ಳುವಂತೆ, ಮಗುವನ್ನು ತೋಳಿನಿಂದ ತೋಳಿಗೆ ಬದಲಿಸುತ್ತಿರುವಂತೆ, ಮಗುವಿನ ಕಣ್ಣುಗಳನ್ನು ಒಬ್ಬೊಬ್ಬರಾಗಿ ದಿಟ್ಟಿಸಿ ನೋಡುತ್ತಿರುವಂತೆ ಹಾಡಿದ್ದರು. ನಾನು ಕಣ್ಣು ತುಂಬಿಕೊಂಡು ಅವರನ್ನು ನೋಡುತ್ತಿದ್ದೆ. ಈ ಹಾಡುಗಳು ಯಾವುದೂ ಅರ್ಥವಾಗದೇ ಹೋಗಿದ್ದಿದ್ದರೆ, ಕಣ್ಣುಗಳು ಮಸುಕಾಗಿರುವ ನನಗೆ ಅವರ ಹಾಡಿನ ಕಣ್ಣುಗಳು ಬಂದಿದ್ದರೆ, ಇವರ ಹಾಗೆ ನಾನೂ ಒಂದು ಕೊಳೆಯಿಲ್ಲದ ಆತ್ಮವಾಗಿ ಎಲ್ಲ ಕಡೆ ಸುಳಿದಾಡುವಂತಿದ್ದರೆ ಎಂದು ಹಂಬಲಿಸಿಕೊಂಡು ಕೂತಿದ್ದೆ. ಅಲಿಮಹಮ್ಮದ್ ಖಾನ್ ದುರಾನಿಯವರ ಕಣ್ಣು ಕಾಣಿಸದ ನಾಲಕ್ಕು ಪುತ್ರಿಯರಾದ ಖನೀಜ್ ಫಾತಿಮಾ, ಫಿರ್ದೌಸ್, ಆಯಿಶಾ ಸಿದ್ದಿಕಾ ಹಾಗೂ ಮಾರಿಯಾ ಕುಲ್ಸುಂ ಆವತ್ತು ಅಷ್ಟೊಂದು ಹಾಡಿ ನಗುತ್ತಾ ನನ್ನನ್ನು ಬೀಳು ಕೊಂಡಿದ್ದರು. ಆವತ್ತು ಕತ್ತಲಲ್ಲಿ ವಾಪಸು ಬರುವಾಗ ನನಗೆ ಯಾವು ಯಾವುದೋ ನಕ್ಷತ್ರಗಳು ವಿನಾಕಾರಣ ಗೋಚರಿಸುತ್ತಿದ್ದವು.
Filed under: ಮೈಸೂರಿನಿಂದ ಅಂಕಣ | 3 Comments »
Posted on Monday February 26, 2007 by Rasheed
ಶಾಮಾಚಾರಿಗಳು ಹನ್ನೆರಡು ವರ್ಷಗಳ ಬಾಲಕನಾಗಿರುವಾಗ ಹಸಿವು ತಾಳಲಾಗದೆ ಮಂಗಳೂರಿನಿಂದ ಮಾಡರ್ನ್ ಬಸ್ಸು ಹತ್ತಿ ಅರಸರ ಮೈಸೂರಿಗೆ ಬಂದವರು ಈಗ ಅರಸೊತ್ತಿಗೆಯಿಲ್ಲದ ಅರಮನೆಯ ಒಂದು ಮೂಲೆಯ ಮೆಟ್ಟಿಲೊಂದರ ಕೆಳಗಿನ ಸಂದಿನಂತಿರುವ ಕೋಣೆಯೊಂದರಲ್ಲಿ ಸಂದಿವಾತ ಪೀಡಿತರಾಗಿ ತಮ್ಮ ಕೊನೆಯ ದಿನಗಳನ್ನು ಕಳೆಯುತ್ತಿದ್ದಾರೆ. ಅರಮನೆಯ ಆಭರಣಗಳಿಗೆ ಹೊಳಪು ಬರಿಸಿ ಬರಿಸಿ ಅವರ ಕಣ್ಣುಗಳು ಈಗಲೂ ಹೊಳೆಯುತ್ತಿರುವಂತೆ ಕಾಣಿಸುತ್ತಿವೆ. ತಮ್ಮ ಯೌವನದಲ್ಲಿ ಅವರು ಬಲು ಸುಂದರವಾಗಿ ದ್ದರು ಅನ್ನುವುದು ಅವರನ್ನು ಈಗ ನೋಡಿದರೂ ಯಾರಿಗಾದರೂ ಗೋಚರಿಸುತ್ತವೆ.
Filed under: ಮೈಸೂರಿನಿಂದ ಅಂಕಣ | 2 Comments »
Posted on Tuesday February 20, 2007 by Rasheed
ಮೈಸೂರಿನ ಮಹಾರಾಜ ಕಾಲೇಜಿನ ಕನ್ನಡ ಸಂಘದ ಗ್ರೂಪ್ ಫೋಟೋ ಒಂದರಲ್ಲಿ ಎರಡನೆಯ ಸಾಲಿನಲ್ಲಿ ನಿಂತಿರುವವರಲ್ಲಿ ಎಡದಿಂದ ಮೂರನೆ ಯವರು ಅಠಾಣಾ ರಾಮಣ್ಣನವರು. ಮೊದಲನೆಯ ಸಾಲಿನಲ್ಲಿ ಕೆ.ವಿ. ಪುಟ್ಟಪ್ಪ, ಡಿ.ಎಲ್. ನರಸಿಂಹಾಚಾರ್, ತೀ.ನಂ. ಶ್ರೀಕಂಠಯ್ಯ ಮೊದಲಾದವರು ನಿಂತಿದ್ದಾರೆ. ಮೂರನೆಯ ಸಾಲಿನಲ್ಲಿ ಎಸ್.ವಿ. ರಂಗಣ್ಣ, ಎ.ಎನ್. ಮೂರ್ತಿರಾವ್, ವಿ. ಸೀತಾರಾಮಯ್ಯ ಮೊದಲಾದವರಿದ್ದಾರೆ. ಕುಳಿತಿರುವವರಲ್ಲಿ ಬಿ.ಎಂ. ಶ್ರೀಕಂಠಯ್ಯ, ಡಿ.ವಿ. ಗುಂಡಪ್ಪ, ಎ.ಆರ್. ಕೃಷ್ಣಶಾಸ್ತ್ರಿ, ಡಿ.ಎಸ್. ವೆಂಕಯ್ಯ ನವರಿದ್ದಾರೆ. ಅಠಾಣಾ ರಾಮಣ್ಣನವರು ಕುವೆಂಪು ಅವರಿಗಿಂತ ಹಿರಿಯರು. ಎ.ಎನ್. ಮೂರ್ತಿರಾಯರ ವಯಸ್ಸಿನವರು. ಕುವೆಂಪು ಅವರು ಈ ಗ್ರೂಪ್ ಫೋಟೋದಲ್ಲಿ ಬುದ್ಧಿವಂತರ ನಡುವೆ ಮನಸ್ಸಿನೊಳಗೆ ತುಂಬ ತುಂಟತನಗಳನ್ನು ಇಟ್ಟುಕೊಂಡು ಗಂಭೀರವಾಗಿರಲು ಯತ್ನಿಸುತ್ತಿರುವ ಪೋರನಂತೆ ಕಾಣಿಸುತ್ತಿ ದ್ದಾರೆ. ರಾಮಣ್ಣನವರು ಎಲ್ಲವನ್ನೂ ಅರ್ಥ ಮಾಡಿಕೊಂಡು ಸುಮ್ಮನಿರುವ ಅಣ್ಣನಂತೆ ಪೋಸು ಕೊಟ್ಟಿದ್ದಾರೆ.
Filed under: ಮೈಸೂರಿನಿಂದ ಅಂಕಣ | 12 Comments »
Posted on Tuesday February 13, 2007 by Rasheed
‘ಗಡಿಯಾರಗಳು ಮುರಿದು ಹೋದಷ್ಟು ಮನುಷ್ಯದೊಡ್ಡ ಕಾಲಜ್ಞಾನಿಯಾಗುತ್ತಾನೆ, ಆಸ್ಟತ್ರೆಗಳಲ್ಲಿ ಮನುಷ್ಯ ಹೆಚ್ಚು ತೀರಿಹೋದಷ್ಟೂ ಮಾನವ ಶರೀರ ಶಾಸ್ತ್ರ ಬೆಳೆಯುತ್ತಾ ಹೋಗುತ್ತದಲ್ಲಾ ಹಾಗೆ’ ಎಂದು ನನಗೆ ನನ್ನ ಅಜ್ಜ ಕುಳಿತಲೈ ಸುಬ್ರಹ್ಮಣ್ಯ ಅಯ್ಯರ್ ಲಕ್ಷಣ ಅಯ್ಯರ್ ಬುದ್ದಿವಾದ ಹೇಳಿ ಗಡಿಯಾರ ರಿಪೇರಿ ಮಾಡು ಕೂರಿಸುತ್ತಿದ್ದರು ಎಂದು ಮೈಸೂರಿನ ಪೌಂಟೈನ್ ಸರ್ಕಲ್ ಹತ್ತಿರವಿರುವ ಶಿವಾಜಿ ರಸ್ತೆಯ ಹೊರಾಲಜಿಸ್ಟ್ ಎಂ. ಎಸ್. ಚಂದ್ರಶೇಖರ್ ಅಯ್ಯರ್ ಆ ಕತ್ತಲಲ್ಲಿ ಕ್ಯಾಂಡರ್ ಹಚ್ಚಿ ನನಗೆ ವಿವರಿಸಿ ಹೇಳುತ್ತಿದ್ದರು.
Filed under: ಮೈಸೂರಿನಿಂದ ಅಂಕಣ | No Comments »
Posted on Tuesday February 6, 2007 by Rasheed
ಮೈಸೂರಿನ ಪ್ರಪಾತದಂತಿರುವ ಇಳಿಜಾರೊಂದರಲ್ಲಿ ಏಕಲವ್ಯ ನಗರ ಎಂಬ ಅದ್ಭುತ ಕೊಳಗೇರಿಯೊಂದಿದೆ. ಈ ಕೊಳಗೇರಿಯಲ್ಲಿರುವ ಮುನ್ನೂರು ನಾನೂರು ಗುಡಿಸಲುಗಳಲ್ಲಿ ಶಿಳ್ಳೆ ಕ್ಯಾತರು, ದೊಂಬಿದಾಸರು, ಹಕ್ಕಿ ಪಿಕ್ಕಿಗಳು, ಗೊಂಬೆರಾಮರು, ಇತ್ಯಾದಿ ಕಲಾವಿದರಿದ್ದಾರೆ. ಈ ಗುಡಿಸಲುಗಳನ್ನು ಗುಡಿಸಲು ಎಂದು ಹೇಳುವುದು ತಪ್ಪಾಗುತ್ತದೆ. ಏಕೆಂದರೆ ಈ ತಡಿಕೆಯಂತಹ ಕೋಳಿ ಗೂಡುಗಳೊಳಗೆ ನಾಟಕದ ಸಿಂಹಾಸನಗಳು, ಕಿರೀಟಗಳು, ಗದೆಗಳು, ಹಾರ್ಮೋನಿಯಂ, ಏಕತಾರಿಗಳು ಮತ್ತು ಕಲಾವಿದ ರಾದ ಮನುಷ್ಯರು ಅವರ ಮಕ್ಕಳು, ಬೆಕ್ಕುಗಳು ಮತ್ತು ನಾಯಿಗಳು ಉಸಿರಾಡಿ ಕೊಂಡಿರುತ್ತವೆ. ತಡಿಕೆಗಳ ಹೊರಗೆ ಪಟ್ಟದ ಕುದುರೆಗಳು, ಸಾರೋಟು ಗಾಡಿಗಳು ಮತ್ತು ಬಯಲಲ್ಲಿ ಕೂತವರ ಹಿಂದೆ ಬೀಡಾಡಿ ಹಂದಿಗಳು ಓಡಾಡಿಕೊಂಡಿರುತ್ತವೆ.
Filed under: ಮೈಸೂರಿನಿಂದ ಅಂಕಣ | 8 Comments »
Posted on Tuesday January 30, 2007 by Rasheed
ಸುಂದರ್ ಬ್ರಾಂಡ್ ಹಲ್ಲುಪುಡಿ ಮಾರುವ ಪಂಡಿತಪ್ಪ ಸ್ವಾಮಿ ನನಗೆ ಇಲ್ಲಿ ಕಾಯಲು ಹೇಳಿದ್ದರು. ಈ ಪಂಡಿತಪ್ಪ ಸ್ವಾಮಿ ಮೈಸೂರಿನವರು ಎಂದು ನನಗೆ ಗೊತ್ತಿರಲಿಲ್ಲ. ಹಾಗೆ ನೋಡಿದರೆ ಇವರ ನೆನಪೂ ನನಗಿರಲಿಲ್ಲ. ಆವತ್ತು ರಾತ್ರಿ ಒಂಬತ್ತು ಗಂಟೆಯ ಹೊತ್ತಿಗೆ ಮೈಸೂರಿನ ರೈಲು ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ ಲೈಟು ಯಾಕೋ ಇದ್ದಕ್ಕಿದಂತೆ ಕೆಟ್ಟು ಹೋಗಿರದಿದ್ದರೆ ಇವರನ್ನು ಬಹುಶಃ ಈ ಜೀವಮಾನದಲ್ಲಿ ನಾನು ನೋಡುತ್ತಲೂ ಇರಲಿಲ್ಲ.
Filed under: ಮೈಸೂರಿನಿಂದ ಅಂಕಣ | 2 Comments »
Posted on Monday January 22, 2007 by Rasheed
ನಾನಾದರೋ ಮೊನ್ನೆ ಜನವರಿ 16ಕ್ಕೆ ಸೂಫಿ ಸಂತರು ಕುಂತ ಈ ಗುಡ್ಡಕ್ಕೆ ಬಂದಿದ್ದೆ. ಈ ಗುಡ್ಡದಲ್ಲಿ ಸುಮಾರು ನೂರು ವರ್ಷಗಳ ಹಿಂದೆ ವಾಸವಾ ಗಿದ್ದ ಗುಮ್ನಾಮ್ ಬಾದಶಾ ಎಂಬ ಸೂಫಿ ಸಂತನ ಗೋರಿಯಿತ್ತು. ಇತ್ತೀಚೆಗೆ 25 ವರ್ಷಗಳ ಹಿಂದೆಯ ವರೆಗೆ ಮೈಸೂರಿನಿಂದ ಬೆಂಗಳೂರಿಗೆ ಹೊರಡುತ್ತಿದ್ದ ಎಲ್ಲ ರೈಲು ಬಂಡಿ ಗಳೂ ಈ ಸೂಫಿ ಸಂತನ ಗುಡ್ಡದ ಬಳಿ ನಿಲ್ಲುತ್ತಿದ್ದವಂತೆ. ನಿಂತು ಅದರಿಂದ ರೈಲಿನ ಚಾಲಕ ಇಳಿದು ಗುಡ್ಡ ಹತ್ತಿ ಈ ಸಂತನ ಸಮಾಧಿಯ ಬಳಿ ಚಿರಾಗ್ ಎಂಬ ದೀಪ ಹೊತ್ತಿಸಿ ಆಮೇಲೆ ರೈಲುಬಂಡಿ ಹೊರಡುತ್ತಿತ್ತಂತೆ.
Filed under: ಮೈಸೂರಿನಿಂದ ಅಂಕಣ | 3 Comments »
Posted on Monday January 22, 2007 by Rasheed
ಆ ಒಂಟಿ ಸಲಗ ನನ್ನನ್ನು ಹೂವಿನಂತೆ ಆಕಾಶದಲ್ಲಿ ಹತ್ತು ಅಡಿ ಎತ್ತರಕ್ಕೆ ಎಸೆಯಿತು. ಚೆಂಡಿನಂತೆ ಕಾಡಿನೊಳಕ್ಕೆ ಅಷ್ಟು ದೂರ ಕಾಲಿನಿಂದ ದೂಡಿತು, ಸೊಂಡಿಲಿನಿಂದ ಎತ್ತಿ ದಂತಗಳ ಮೇಲೆ ಕೂರಿಸಿತು, ನೆಲದಲ್ಲಿ ಮಲಗಿಸಿ ದೂರದಿಂದ ನೋಡಿತು… ಒಟ್ಟಿನಲ್ಲಿ ಈಗ ಯೋಚಿಸಿದರೆ ಆ ಒಂಟಿಸಲಗ ನನ್ನನ್ನು ಓರ್ವ ಪ್ರೇಮಿಯಂತೆ ಒಂದೂವರೆ ತಾಸುಗಳ ಹೊತ್ತು ಕಾಡಿಸಿತ್ತು’.
Filed under: ಮೈಸೂರಿನಿಂದ ಅಂಕಣ | 5 Comments »