Posted on Monday December 31, 2007 by Rasheed
ಪ್ರಿಯರೇ,
ಈ ತನಕದ ಹುಡುಗಾಟ, ಆಲಸ್ಯ, ಸುಖಾಸುಮ್ಮನೆ ತಿರುಗಾಟ-ಎಲ್ಲವೂ ಸಖತ್ ಚೆನ್ನಾಗಿದ್ದವು ನಿಜ.
ನಾಳೆಯಿಂದ ಈ ಎಲ್ಲದಕ್ಕೆ ಒಂದು ರೂಪ, ಒಂದು ಆಕಾರ ಬರುತ್ತಿದೆ.
- ಅದೂ ಒಂದು ಹೂವಿನ ಹೆಸರಿನ ರೂಪದಲ್ಲಿ.
ಇದು ನಾವು ಕಂಡಿರುವ ಒಂದು ದೊಡ್ಡ ಕನಸಿನ ಸಣ್ಣದೊಂದು ತುಣುಕು ಮಾತ್ರ.
ಕನ್ನಡ ನಾಡಿನ ಕನ್ನಡ ನುಡಿಯ ಕನ್ನಡ ನೆಲದ ಬದುಕಿನ ಕುರಿತು, ಬದುಕಿನ ಉಲ್ಲಾಸದ ಕುರಿತು, ಬದುಕಿನ ನೂರಾರು ಸಾಧ್ಯತೆಗಳ ಕುರಿತು- ಇಲ್ಲಿನ ಸೌಂದರ್ಯ,ಗೋಳು,ಕವಿತೆ,ಬಾಳು,ಇತಿಹಾಸ,ನೆನಪು,ಹಾಡು,ಕಷ್ಟ ಕೋಟಲೆಗಳ ಕುರಿತು..
ಬೇರೇನೂ ಅಲ್ಲ. ಒಂದು ಅಂತರ್ಜಾಲ ತಾಣ ತರಬೇಕು ಎಂದು ಕನಸು ಕಂಡಿದ್ದೆವು.
ಅದರ [...]
Filed under: Blogroll, Friends, ಅನುವಾದಗಳು, ಅಲೆಮಾರಿಯ ದಿನಚರಿ, ಈ ತಾಣ ಎಲ್ಲಿ ಬಲ್ಲಿರೇನ, ಕತೆ-ಗಿತೆ, ತೇಜಸ್ವಿ, ಪ್ರಬಂಧ, ಮಾತಿಗೂ ಆಚೆ, ಮುಖಚಿತ್ರ, ಮೈಸೂರಿನಿಂದ ಅಂಕಣ, ಮೋಹಿತನ ಕವಿತೆಗಳು, ರೂಮಿ, ಷಿಲ್ಲಾಂಗಿನಿಂದ ಲಂಕೇಶ, ಹಾಡು-ಪಾಡು, ಹೂವಿನಕೊಲ್ಲಿ | 5 Comments »
Posted on Thursday December 27, 2007 by Rasheed
ಕತೆಯ ಆಶೆಯನ್ನು ಬಿಟ್ಟು ಮತ್ತೆ ಸುಮ್ಮನೇ ತಿರುಗಾಟ ಶುರು ಮಾಡಿದ್ದೆ. ಏನು ಬರೆಯಲು ಹೊರಟರೂ ಮತ್ತೆ ಅದೇ ಬಾಲ್ಯಾಕಾಲದ ಹಾವಳಿ ಜಾಸ್ತಿಯಾಗಿ. ಹಳೆಯದ್ದನ್ನೆಲ್ಲ ಮೂಟೆಕಟ್ಟಿ ಅಟ್ಟದಲ್ಲಿಟ್ಟು ಇಲ್ಲಿಗೆ ಬಂದರೂ ಬಾಲ್ಯದ ಕಾಟ ಕಡಿಮೆಯಾಗಲಿಲ್ಲವಲ್ಲಾ ಎಂದು ನಿಟ್ಟುಸಿರು ಬಿಡುತ್ತಿದ್ದೆ. ಊರಲ್ಲಿರುವ ಮಡದಿ ಕಾಗದ ಬರೆದು `ನೀನು ಗೊತ್ತೇ ಇಲ್ಲದ ಅಪರಿಚಿತ ಅಂತ ಅನ್ನಿಸುತ್ತಿದೆ. ನೀನು ಬೇರೆ ಯಾರೋ ಗಂಡಸು ಅಂತ ಅನ್ನಿಸಿ ಹೆದರಿಕೆಯಾಗುತ್ತಿದೆ. ನಿಜಕ್ಕೂ ನೀನು ಯಾರೂ ? ನನಗೆ ಯಾಕೋ ನೀನು ಎಲ್ಲೋ ಇರುವ ಬೇರೆ ಯಾರೋ [...]
Filed under: ಷಿಲ್ಲಾಂಗಿನಿಂದ ಲಂಕೇಶ | No Comments »
Posted on Saturday December 15, 2007 by Rasheed
ಕತೆಯೊಂದನ್ನು ಬರೆಯಲು ಹೋರಾಡುತ್ತಾ ಇದೀಗ ಅದರಿಂದ ತಪ್ಪಿಸಿಕೊಳ್ಳಲು ಈ ಕಾಗದವನ್ನು ಬರೆಯುತ್ತಿರುವೆ. ಕತೆಯನ್ನು ಮನಸ್ಸಿನಲ್ಲಿಯೇ ಅಂದುಕೊಳ್ಳುತ್ತಾ ಆನಂದಿಸುತ್ತಾ ಮನಸ್ಸಿನಲ್ಲಿಯೇ ಮುಗಿಸಿ ಕೂರುವುದು ಎಂತಹ ಸುಲಭದ ವಿಷಯ. ಆದರೆ ಅದನ್ನೇ ಕಾಗದದಲ್ಲಿ ತರುವುದು,ಪಾತ್ರಗಳನ್ನು ಜೋಡಿಸುವುದು, ಅವುಗಳ ಬಾಯಿಂದ ಮಾತುಗಳನ್ನು ಹೇಳಿಸುವುದು ಎಂತಹ ರೇಜಿಗೆಯ ಕೆಲಸ. ಈ ಮಹಾ ಮಹಾ ಕತೆಗಾರರೆಲ್ಲಾ ಎಂತಹ ಹಠಮಾರಿ ಮಹಾತ್ವಾಕಾಂಕ್ಷೀ ಮನುಷ್ಯರು ಅಂತ ಯೋಚಿಸಿ ಆಶ್ಚರ್ಯವಾಗುತ್ತಿದೆ.
ನಿನ್ನೆ ಮೊನ್ನೆಯೆಲ್ಲಾ ಇಲ್ಲಿ ಷಿಲ್ಲಾಂಗಿನಲ್ಲಿ ವಿಪರೀತ ಮಳೆ ಸುರಿಯುತ್ತಿತ್ತು. ಅದಕ್ಕೂ ಮೊದಲು ಈ ಊರ ತುಂಬಾ ಕಾಡು ಚೆರ್ರಿ ಮರಗಳು ನಸುಗೆಂಪು [...]
Filed under: ಷಿಲ್ಲಾಂಗಿನಿಂದ ಲಂಕೇಶ | 5 Comments »
Posted on Monday October 29, 2007 by Rasheed
ಕೆಲವು ವರುಷಗಳ ಹಿಂದೆ world cup football ನಡೆಯುತ್ತಿದ್ದಾಗ ಒಬ್ಬನಿಗೇ ಬೇಸರವಾಗಿ ಎಂದಿನ ಹಾಗೆ ಮಂಗಳೂರಿನ ಬೀದಿಗಳಲ್ಲಿ ತಲೆ ತಗ್ಗಿಸಿಕೊಂಡು ನಡೆಯುತ್ತಿದ್ದೆ. ಹಾಗೇ ನೋಡಿದರೆ ನೆಹರೂ ಮೈದಾನದಲ್ಲಿ football ಆಡುತ್ತಿದ್ದರು. ಜನ ಸೇರಿದ್ದರು. ಮೈದಾನದ ಕೊನೆಯಲ್ಲಿ ರಾಜಸ್ತಾನದ ದೊಂಬರಾಟದ ಕುಟುಂಬವೊಂದು ಡೇರೆ ಬಿಚ್ಚಿ ನೆಲದಲ್ಲಿ ಹರವಿಕೊಂಡು ಆಕಾಶವನ್ನು ನೋಡುತ್ತಾ ಕೂತಿತ್ತು. ಹೆಂಗಸೊಬ್ಬಳು ಬಾಯಿ ಬಡಿಯುತ್ತಾ ಅಳುತ್ತಿದ್ದಳು .ಏಕೆಂದರೆ ಆಕೆಯ ಆರು ವರ್ಷದ ಮಗಳು ಕಾಣೆಯಾಗಿದ್ದಳು. ಕಾಣೆಯಾದ ಆ ಬಾಲಕಿಯ ಹೆಸರು ಶನ್ಯಾಶಿ. ಇದ್ದಕ್ಕಿದ್ದಂತೆಯೇ ಆಕೆ ಜನಜಂಗುಳಿಯಲ್ಲಿ ಕಾಣೆಯಾಗಿದ್ದಳು. ಆಕೆಯಿಲ್ಲದೆಯೇ ತಿರುಗಿ [...]
Filed under: ಷಿಲ್ಲಾಂಗಿನಿಂದ ಲಂಕೇಶ | 7 Comments »
Posted on Monday October 22, 2007 by Rasheed
ಮಂಗಳೂರಲ್ಲಿ ಹಳೆಯ ಮುಖ್ಯಮಂತ್ರಿಯೊಬ್ಬರ ಇನ್ನೊಂದು ಕಾದಂಬರಿಯ ಬಿಡುಗಡೆಯಿತ್ತು. ಕಾದಂಬರಿ ಬರೆದು ಮುಗಿಸಿದ ಮಾಜಿ ಮುಖ್ಯಮಂತ್ರಿ ಖುಷಿಯಿಂದ ಕಂಗೊಳಿಸುತ್ತಿದ್ದರು. ಕನ್ನಡ ಸಾಹಿತ್ಯಕ್ಕೆ ನಿಮ್ಮ ಮುಂದಿನ ಕೊಡುಗೆ ಏನು ಎಂದು ಕೇಳಿದರೆ ಒಂದು ಮಹಾಕಾವ್ಯಕ್ಕೆ ಸ್ಕೆಚ್ ಹಾಕಿಕೊಂಡಿರುವೆ ಎಂದು ಹೇಳಿದರು. ‘ಮಹಾಕಾವ್ಯ ಅಂದರೆ ಹದಿನೆಂಟು ಬಗೆಯ ವರ್ಣನೆಗಳು ಇರುತ್ತದಂತಲ್ಲಾ ಅದೆಲ್ಲವೂ ಇರುತ್ತದಾ?’ ಎಂದು ಕೇಳಿದೆ. ‘ಎಲ್ಲವೂ ಸಿದ್ಧವಾಗಿದೆ’ ಎಂದು ಹೇಳಿದರು. ‘ಇದಕ್ಕೆಲ್ಲ ಸಂಸ್ಕೃತ, ಪಾಲಿ ಇತ್ಯಾದಿ ಓದಿಕೊಂಡಿರಬೇಕಲ್ಲ’ ಎಂದು ಕೇಳಿದೆ. ‘ಎಲ್ಲವೂ ಆಗಿದೆ’ ಎಂದು ಹೇಳಿದರು. ‘ಹಾಗಾದರೆ ನಾವೆಲ್ಲ ಕನ್ನಡಕ್ಕೆ ಬರಲಿರುವ [...]
Filed under: ಷಿಲ್ಲಾಂಗಿನಿಂದ ಲಂಕೇಶ | No Comments »
Posted on Friday October 5, 2007 by Rasheed
ಇವತ್ತು ಇಲ್ಲೇ ತುರಾದ ಹತ್ತಿರದ ಒಂದು ಹಳ್ಳಿಗೆ ಹೋಗಿದ್ದೆ. ಯಾರೋ ಒಬ್ಬರು ‘ಬನ್ನೀ, ವಿಶ್ವ ಸ್ತನ್ಯಪಾನ ವಾರಾಚರಣೆ ಆಚರಿಸುತ್ತಿದ್ದೀವಿ’ ಅಂತ ಕರೆದಿದ್ದರು. ದಾರಿಯೇನೋ ತುಂಬಾ ಚೆನ್ನಾಗಿತ್ತು. ಮಳೆ ನಿಂತು ಬಿಸಿಲು ಚಾಚಿಕೊಂಡು ನೆಲದಿಂದ ಮೇಲಕ್ಕೆ ಮೋಡಗಳು ಎದ್ದು ನಿಂತು ಹಸಿರು ಬೆಟ್ಟಗಳು ಮೇಲೆ ಹರಡಿಕೊಂಡು ಎಲ್ಲಾ ಕನಸಿನ ಹಾಗೆ ಕಾಣುತ್ತಿತ್ತು. ಹಳ್ಳಿಗೆ ಹೋಗಿ ನೋಡಿದರೆ ಒಂದು ಸಣ್ಣ ಕೋಣೆಯ ಒಳಗೆ ಹತ್ತಾರು ಗ್ರಾಮಗಳ ತಾಯಂದಿರನ್ನು ಕೂರಿಸಿಕೊಂಡು ಒಬ್ಬ ಅಧಿಕಾರಿ ಇಂಗ್ಲೀಷಿನಲ್ಲಿ ಭಾಷಣ ಹೊಡೆಯುತ್ತಿದ್ದ. ಮಗುವಿಗೆ ಎದೆ ಹಾಲು [...]
Filed under: ಷಿಲ್ಲಾಂಗಿನಿಂದ ಲಂಕೇಶ | 2 Comments »
Posted on Wednesday September 26, 2007 by Rasheed
ಅಲ್ಲಿ ನಿಮ್ಮನ್ನೆಲ್ಲ ನೋಡಿ ತಿರುಗಿ ಬಂದು ಇಲ್ಲಿ ಷಿಲ್ಲಾಂಗ್ ಎಂಬ ನನ್ನ ಕನಸಿನ ಲೋಕದಲ್ಲಿ ಒಬ್ಬನೇ ಕುಳಿತು ಕೊಂಡಿದ್ದೇನೆ. ಹೂಬಿಟ್ಟಿದ್ದ ಮರಗಳಲ್ಲೆಲ್ಲಾ ಈಗ ಹಣ್ಣುಗಳು ತುಂಬಿಕೊಂಡಿವೆ. ಕಿತ್ತಳೆ ಮಾರುತ್ತಿದ್ದ ಹುಡುಗಿಯರೆಲ್ಲಾ ಈಗ ಎಂತ ಎಂತಹದೋ ಹಣ್ಣುಗಳನ್ನು ಬುಟ್ಟಿಯಲ್ಲಿ ತುಂಬಿಕೊಂಡು ಕುಳಿತಿದ್ದಾರೆ. ಮಳೆಬಿಟ್ಟು ಮತ್ತೆ ಮಳೆ ಸುರಿಯುತ್ತಿದೆ. ಇಂದು ಸಂಜೆ ಮಳೆಯ ನಡುವೆ ದಾರಿ ಮಾಡಿಕೊಂಡು ಎಲ್ಲ ಕಡೆ ಸುತ್ತಾಡಿ ಹಲವು ಬಗೆಯ ಹಣ್ಣುಗಳನ್ನು ಕೊಂಡು ಒಂದೊಂದನ್ನೇ ತಿನ್ನುತ್ತಾ ಕುಳಿತೆ. ಒಂದು ಹಣ್ಣಿನ ಹೆಸರು ಮಾತ್ರ ಗೊತ್ತಾಯಿತು. ಅದು [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »
Posted on Saturday September 22, 2007 by Rasheed
ಈ ಹೊತ್ತು ಒಬ್ಬಳು ಸುಂದರಿಯ ಕುರಿತು ಯೋಚಿಸುತ್ತಾ ಕುಳಿತಿರುವೆ. ನಾಳೆ ಅವಳ ಹುಟ್ಟು ಹಬ್ಬ. ಹಾಗಾಗಿ ಸಲೀಸಾಗಿ ನಿಮಗೆ ಬರೆಯಲೂ ಆಗುತ್ತಿಲ್ಲ. ಒಂದು ಕವಿತೆ ಬರೆಯಲಾ ಅನಿಸುತ್ತಿದೆ. ಹೋಗಲಿ ಬಿಡಿ ಅದೂ ಬೇಡ. ಸುಮ್ಮನೇ ಬರೆಯುತ್ತಾ ಸಲೀಸಾಗುತ್ತಾ ಹೋಗುತ್ತೇನೆ.
ಆಕೆಯನ್ನು ನಾನೂ ಕಂಡದ್ದು ಎರಡೇ ಸಲ. ಅದೂ ಸ್ವೀಡನ್ ನ ಸ್ಟಾಕ್ ಹೋಂ ಎಂಬ ಮಹಾನಗರದಲ್ಲಿ . ಎರಡೂ ಬಾರಿಯೂ ಅವಳು ಎಡಕಣ್ಣಿನ ಕೆಳಗೆ ಬೆಳ್ಳಿಯ ಬಣ್ಣದಿಂದ ನಕ್ಷತ್ರಗಳನ್ನು ಬರೆದುಕೊಂಡಿದ್ದಳು. ಅವಳ ಮೂಗಲ್ಲಿ ನತ್ತು ಇದ್ದಿರಬಹುದ ಎಂದು ಈಗ [...]
Filed under: ಷಿಲ್ಲಾಂಗಿನಿಂದ ಲಂಕೇಶ | 4 Comments »
Posted on Monday September 10, 2007 by Rasheed
ಮೇಘಾಲಯ ಎಂಬ ಈ ಪುಟ್ಟ ರಾಜ್ಯದ ರಾಜಕೀಯ ಇಡೀ-ವಾರ ನನ್ನ ತಲೆಯನ್ನು ತಿಂದು ಹಾಕಿಬಿಟ್ಟಿತು. ಮೂವರು ಮಂತ್ರಿಗಳು ಹೇಳದೆ ಕೇಳದೆ ಮುಖ್ಯಮಂತ್ರಿಯನ್ನು ಬಿಟ್ಟು ಎದುರುಪಾರ್ಟಿಯನ್ನು ಸೇರಿಕೊಂಡು ಬಿಟ್ಟಿದ್ದಾರೆ. ಎಪ್ಪತ್ತೇಳು ವರ್ಷದ ಮುಖ್ಯಮಂತ್ರಿ ಬಿದ್ದು ಹೋಗುವ ಸ್ಥಿತಿಯಲ್ಲಿದ್ದಾರೆ. ನಾನು ‘ಏನು ಕತೆ ನಿಮ್ಮ ಪರಿಸ್ಥಿತಿ ವೀಕ್ ಆಗಿ ಬಿಟ್ಟಿದೆಯಲ್ಲ’ ಅಂತ ಕೆಣಕಿದೆ. ಅವರು ತಟ್ಟನೆ ಶರಟಿನ ತೋಳು ಮಡಚಿ ತೋಳು ಬಲ ತೋರಿಸುತ್ತಾ ‘ಏನು ವೀಕ್ ಆಗಿದ್ದೇನಾ ನೋಡು’ ಅಂತ ನನ್ನ ಹೊಟ್ಟೆಗೆ ಪಂಚ್ ಮಾಡಲು ಬಂದರು. ನಾನು ನಗುತ್ತಾ [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »
Posted on Wednesday September 5, 2007 by Rasheed
ಯಾಕೋ ಸಣ್ಣಗೆ ನಗುಬರುತ್ತಿದೆ. ನಾನು ಪ್ರತಿವಾರವೂ ಕುಡುಮಿಯ ಹಾಗೆ ಹಠ ಹಿಡಿದು ನಿಮಗೆ ಪತ್ರಬರೆಯುವುದು. ಕೆಲವರು ಗೆಳೆಯರು ಇನ್ನು ಈತ ಕತೆಯೂ ಬರೆಯಲಾರ ಕವಿತೆಯೂ ಬರೆಯಲಾರ ಬರೀ ಪತ್ರ ಬರೆದು ಹಾಳಾಗಿ ಹೋಗುತ್ತಿರುವ, ಎಂದು ವಿನಾಕಾರಣ ಹಲುಬುವುದು,- ಎಲ್ಲವನ್ನೂ ಯೋಚಿಸಿ ಯೋಚಿಸಿ ಈವತ್ತು ಚಪಾತಿ ಲಟ್ಟಿಸಿತ್ತಾ ಕೂತಿದ್ದೆ. ಆಗಲೂ ನಗುಬರುತ್ತಿತ್ತು. ಚಪಾತಿ ನಾನು ಮಾಡಿದರೂ ಗುಂಡಗೆ ಆಗುತ್ತದೆ. ನಾನು ಮಾಡಿದ ದೋಸೆಯಲ್ಲೂ ತೂತುಗಳಿರುತ್ತದೆ ಎಂದೆಲ್ಲಾ ಗುನುಗುತ್ತಿದ್ದೆ.ಊರಿಗೆ ಹೋಗಿದ್ದಾಗ ನನ್ನ ಉಮ್ಮನಿಗೆ ಇಲ್ಲಿ ಷಿಲ್ಲಾಂಗಿನಲ್ಲಿ ಒಳ್ಳೆ ಒಳ್ಳೆಯ ಬಾತುಕೋಳಿಗಳಿವೆ ಅಂತ [...]
Filed under: ಷಿಲ್ಲಾಂಗಿನಿಂದ ಲಂಕೇಶ | No Comments »
Posted on Monday August 27, 2007 by Rasheed
ಏನು ಬರೆಯಲಿ? ಈ ವಾರವೆಲ್ಲಾ ಬೇರೆ ಏನೂ ಮಾಡಲು ಹೋಗದೆ ಬರೆಯ ಆಫೀಸಿನ ಕೆಲಸಗಳನ್ನು ಮಾಡಿಕೊಂಡು ಸುಮ್ಮನೆ ಕುಳಿತಿದ್ದೆ. ಈಶಾನ್ಯ-ಭಾರತ ಪ್ರವಾಹದಲ್ಲಿ ಮುಳುಗಿ ಹೋಗಿ ರೈಲುಗಳೂ ಓಡಾಡದೆ ಊರಿಂದ ಪತ್ರಗಳೂ ಬರಲಿಲ್ಲ. ನಾಲ್ಕೈದಾರು ವಾರಗಳಿಂದ ‘ಪತ್ರಿಕೆ’ಯೂ ಬಂದಿಲ್ಲ. ಊರಿನಿಂದ ಉಮ್ಮ ಫೋನ್ ಮಾಡಿ ಅವಳ ತಲೆನೋವು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ ಅಂತ ಹೇಳಿದಳು. ತಂಗಿಫೋನ್ ಮಾಡಿ ಅಷ್ಟುದೂರ ಊರಿನಲ್ಲಿ ಹಾಗೆಲ್ಲಾ ನಿರ್ಗತಿಕನಂತೆ ಅಲೆದಾಡಬೇಡ. ನಮಗೆ ಇಲ್ಲಿ ಹೆದರಿಕೆ ಆಗುತ್ತಿದೆ ಅನ್ನುತ್ತಿದ್ದಳು.
ನನಗೆ ಯಾಕೋ ನಾನು ಮಂಗಳೂರಿನ ಬೀದಿಗಳಲ್ಲಿ [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »
Posted on Wednesday August 22, 2007 by Rasheed
ಏನೂ ಕೆಲಸವಿಲ್ಲದೆ ಸುಮ್ಮನೆ ಕುಳಿತಿರುವೆ. ಹಗಲೆಲ್ಲ ನಿದ್ದೆ ಹೊಡೆದೆ. ಈ ಬರೆಯವುದು ಮತ್ತು ಎಲ್ಲವನ್ನು ವಿವರಿಸುತ್ತಾ ಇರುವುದು ಎಂತಹ ಬೇಜಾರಿನ ಸಂಗತಿ ಅಂತ ಅನ್ನಿಸಿ ಸುಮ್ಮನೇ ಮತ್ತೆ ನಿದ್ದೆ ಹೋಗುತ್ತಿದ್ದೆ. ಹೋಗಲಿ ಬಿಡಿ. ಸುಮ್ಮನೆ ಬರೆ ನನ್ನ ಕುರಿತೇ ಕೊರೆಯದೆ ಬೇರೆ ಏನಾದರೂ ಹೇಳುವೆ.
ಈ Rainer Maria Rilke ಎಂಬ ಜರ್ಮನಿಯ ಮಹಾಕವಿ Rodin ಎಂಬ ಫ್ರೆಂಚ್ ಮಹಾಶಿಲ್ಪಿಯ ಕಾರ್ಯದರ್ಶಿಯಾಗಿದ್ದ. ಒಂದು ದಿನ ಏನೋ ಸಂಕಟದಲ್ಲಿ ಏನೋ ಯೋಚಿಸುತ್ತಾ ನದಿಯೊಂದರ ದಂಡೆಯ ಮೇಲೆ ಶತಪಥ ಹಾಕುತ್ತಿದ್ದ. ಇದ್ದಕ್ಕಿದ್ದಂತೆ ಅದೇನು [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »
Posted on Friday August 17, 2007 by Rasheed
ಕನ್ನಡದ ಒಂದೊಂದೇ ಅಕ್ಷರಗಳನ್ನು ಪ್ರೀತಿಯಿಂದ ಮೈಸವರುತ್ತಾ, ಜೋಡಿಸುತ್ತಾ, ಚಂದ ನೋಡುತ್ತಾ ಬಹಳ ದಿನಗಳ ಬಳಿಕ ನಿಮಗೆ ಬರೆಯುತ್ತಿರುವೆ. ಯಾಕೋ ಅಹ್ಲಾದವೆನಿಸುತ್ತದೆ. ಹದುಳದಲ್ಲಿ ಹುಣ್ಣಿಮೆ ಮೂಡಿದಂತೆ. ಬೇಂದ್ರೆಯವರಿಗೆ ಮಲ್ಲಿಕಾರ್ಜುನ ಮನ್ಸೂರರ ಹಾಡು ಕೇಳಿ `ಬಿಸಿಲ ಹಣ್ಣನುಂಡು ಚಂದ್ರನ ಜೇನು ಮದ್ದಂತೆ ‘ಅನಿಸಿತ್ತಂತೆ. ನಾನು ಈ ದಿನ ಸಂಜೆ ನಾಲ್ಕು ಗಂಟೆಗೇ ಚಂದ್ರನ ಬೆಳಿನಲ್ಲಿ ನನ್ನ ನೆರಳನ್ನು ಕಂಡು ಚಕಿತಗೊಂಡೆ.ಇಲ್ಲಿ ಈಗಲೇ ಚಳಿಗಾಲ ಮೊದಲಾಗಿ ಮಧ್ಯಾಹ್ನದ ಚಂದ್ರನಂತಹ ಬಿಸಿಲಲ್ಲಿ ಬೆಚ್ಚಗೆ sweater ಹಾಕಿಕೊಂಡು ಓಡಾಡುತ್ತಿರುವೆ. ಈಗಂತೂ ಈ ಚಳಿ ಬಿಸಿಲಲ್ಲಿ ಈ ಊರು [...]
Filed under: ಷಿಲ್ಲಾಂಗಿನಿಂದ ಲಂಕೇಶ | 3 Comments »
Posted on Sunday August 5, 2007 by Rasheed
ಈವಾರ ನಿಮಗೆ ಏನು ಕತೆ ಹೇಳಲಿ? ಯಾವತ್ತೂ ಇಲ್ಲದ ಹಾಗೆ ಈ ಸಂಜೆ ಮನೆಗೆ ಬಂದವನೇ ಸಂಕಟದಲ್ಲಿ ನಿದ್ದೆ ಹೋದೆ. ನಡುನಡುವೆ ಕಣ್ಣು ಬಿಟ್ಟರೆ ಕಿಟಕಿಯ ಹೊರಗೆ ಸಂಜೆ ಕೆಂಪು ಬೆಳಕಲ್ಲಿ ಮಕ್ಕಳು ಆಟ ಆಡುತ್ತಿದ್ದರು. ಹೆಂಗಸರು ಎಲೆ ಅಡಿಕೆ ಜಗಿಯುತ್ತಾ ಬಯಲಲ್ಲಿ ಕಾಲು ನೀಡಿಕೊಂಡು ಮಾತನಾಡುತ್ತಿದ್ದರು. ನಾನು ಹಠ ಹಿಡಿದು ನಿದ್ದೆ ಹೋಗಲು ನೋಡುತ್ತಿದ್ದೆ. ಯಾಕೋ ಕೈಕಾಲುಗಳಲ್ಲೆಲ್ಲಾ ಸಂಕಟ. ಬೆಂಗಳೂರಿನ, ಗಾಂಧಿ ಬಜಾರಿನ ಸಂಜೆ, ಮಾವಿನ ಹಣ್ಣು, ಕೊತ್ತಂಬರಿ ಸೊಪ್ಪು, ಮಲ್ಲಿಗೆ ಹೂವಿನ ಪರಿಮಳ ಏನೇನೆಲ್ಲಾ [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »
Posted on Wednesday August 1, 2007 by Rasheed
ನಿಮ್ಮ ಪತ್ರವಂತೂ ಬರಲೇ ಇಲ್ಲ. ಆದರೂ ನಿಮಗೆ ಬರೆಯುತ್ತಿರುವೆ ಯಾಕೆ ಗೊತ್ತಿಲ್ಲ. ಹೇಗಿತ್ತು ನಿಮ್ಮ ಹುಟ್ಟು ಹಬ್ಬ? ಇಲ್ಲಿ ಈಗ ಹೂ ಅರಳುವ ಕಾಲ ಶುರವಾಗಿದೆ. ಬೋಳುಮರಗಳ ತುಂಬ ಹೂ. ಬೇಲಿಯಲ್ಲಿ ಹೂ, ಹುಲ್ಲಿನ ದಳಗಳಲ್ಲಿ ಹೂ. ಇನ್ನು ಮುಂದೆ ಸೆಪ್ಟೆಂಬರ್ವರೆಗೆ ಒಂದಿಲ್ಲೊಂದು ಹೂಗಳು ಅರಳುತ್ತಲೇ ಇರುತ್ತದೆ. ಈವತ್ತು ಸಂಜೆ ಇಡೀ ದಿನ ಮೋಡಕವಿದು ಕೊಂಚ ಹೊತ್ತು ಸೂರ್ಯನ ಬೆಳಕಿತ್ತು. ನಸು ಬೆಳಕಲ್ಲಿ ಬೀಸುವ ಗಾಳಿಗೆ ಪ್ಲಂ ಮರಗಳ ತುದಿಯಲ್ಲಿ ಚೆರ್ರಿಗಿಡಗಳ ತುದಿಯಲ್ಲಿ ಬೆಳ್ಳಗೆ ಕೆಂಪಗೆ ಚಿಟ್ಟೆಗಳಂತೆ [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »
Posted on Thursday July 26, 2007 by Rasheed
ಒಂದು ಸುಂದರವಾದ ಉದ್ದವಾದ ಹಗಲನ್ನು ಸುತ್ತಿ ಮುಗಿಸಿ ಬಂದು ನಿಮಗೆ ಬರೆಯಲು ಕುಳಿತಿದ್ದೇನೆ. ಯಾವ ಹಂಗೂ ಇಲ್ಲದ ಯಾವ ಗ್ರಂಥ, ವಿಚಾರ, ವಿಮರ್ಶೆ, ಚಿಂತನೆ ಏನೂ ಇಲ್ಲದ ಹಗಲು. ಸುಮ್ಮನೆ ಆಕಾಶವನ್ನೇ ನೋಡುತ್ತಿದ್ದೆ. ನಾನು ಎಂದೂ ನೋಡಿರದ ಕಡುನೀಲಿ ಆಕಾಶ. ದೂರದಿಂದ ದಾರಿ ಕೇಳಿಕೊಂಡು ತುಂಬಾ ದೂರದ ನೆಂಟರಂತೆ ಸಂಬಂಧ ಹುಡುಕಿಕೊಂಡು ಬರುತ್ತಿರುವ ಮೋಡಗಳು ಅಲ್ಲೇ ಸಂಕೋಚದಿಂದ ನಿಂತಿವೆ. ಅದರ ಹಿಂದಿರುವ ಮೋಡಗಳ ಗುಂಪು ತಡೆಹಿಡಿಯಲಾಗದೆ ಅಲ್ಲೇ ನಿಂತುಕೊಂಡಲ್ಲೇ ಮಳೆ ಸುರಿಸುತ್ತಿವೆ. ದೂರದಲ್ಲೆಲ್ಲೋ ಸುರಿಯುತ್ತಿರುವ ಮಳೆಯ ಗಾಳಿ [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »
Posted on Monday July 23, 2007 by Rasheed
ಮನಸಲ್ಲಿ ಆಗುತ್ತಿರುವುದನ್ನೆಲ್ಲಾ ನಿಮಗೆ ಹೇಗೆ ಬರೆದು ತಿಳಿಸಲಿ? ನನ್ನ ಬಾಲ್ಯಕಾಲದ ಬೆಳದಿಂಗಳಿನಂತಹ ಬಿಸಿಲು ಇಲ್ಲಿ ಈಗ ಮರುಕಳಿಸುತ್ತಿದ್ದೆ. ಬಿಸಲಿಗೆ ಮತ್ತು ಬೀಸುವ ಗಾಳಿಗೆ ಇಷ್ಟು ಸುಖವಿದೆ ಎಂದು ಈಗ ಮತ್ತೆ ಗೊತ್ತಾಗುತ್ತಿದೆಮಕ್ಕಳು ಬೆಳಗ್ಗಿನಿಂದ ಸೂರ್ಯಕಂತುವವರೆಗೆ ಬಯಲಲ್ಲಿ ಯಾವ ಆಯಾಸವೂ ಇಲ್ಲದೆ ಇಲ್ಲಿ ಆಡುತ್ತಿರುತ್ತಾರೆ. ಬೀಸುವಗಾಳಿಗೆ ಮೈ ಒಡ್ಡಿ ನಡೆಯುವ ಮುಗುದೆಯರು. ನಾವು ಎಂತಹ ಚಂದದ ಭೂಮಿಯಲ್ಲಿ ಬದುಕಿದ್ದೇವೆ ಎಂದು ಗೊತ್ತಾಗಿ ಮನಸ್ಸು ತುಂಬಿಕೊಳ್ಳುತ್ತಿದ್ದೆ. ಸುಮ್ಮನೇ ಒಬ್ಬನೇ ಇಲ್ಲಿಯ ವಾರ್ಡ್ ಲೇಕ್ ನಲ್ಲಿ ನಡು ಮಧ್ಯಾಹ್ನ ನಡೆಯುತ್ತಿದ್ದೆ. ಸೂರ್ಯನ [...]
Filed under: ಷಿಲ್ಲಾಂಗಿನಿಂದ ಲಂಕೇಶ | 2 Comments »
Posted on Monday July 16, 2007 by Rasheed
ಮಗುವೊಂದರ ಜೊತೆ
ಪ್ರೀತಿಯ ಲಂಕೇಶ್ರಿಗ,
ಮರಳಿ ಶಿಲ್ಲಾಂಗ್ ತಲುಪುವ ತನಕ ನಿಮಗೆ ಬರೆಯಲೇಬಾರದು ಅಂದುಕೊಂಡಿದ್ದೆ. ಆದರೆ ಯಾಕೋ ಈಗ ಈ ರಾತ್ರಿಯಲ್ಲಿ ಆಗುಂಬೆ ಘಾಟಿಯ ಕೆಳಗಿನ ಸೀತಾನದಿಯ ತಟದ ಈ ಜಾಗದಲ್ಲಿ ಕುಳಿತು ನಿಮಗೆ ಬರೆಯಬೇಕು ಅನ್ನಿಸುತ್ತದೆ. ಕೊಡಗು, ಬೆಂಗಳೂರು, ಮೈಸೂರು ಕೇರಳದ ವಯನಾಡು ಮಂಗಳೂರು ಎಲ್ಲ ಕಡೆ ಬಿಸಿಲಲ್ಲಿ ನಾಯಿ ಅಲೆದಂತೆ ಅಲೆದು ಈಗ ಮೂರು ನಾಲ್ಕುದಿನದಿಂದ ಎಲ್ಲೂ ಹೋಗದೆ ಏನೂ ಮಾಡದೆ ಇಲ್ಲಿ ಸುಮ್ಮನೆ ಕುಳಿತಿದ್ದೇನೆ. ಈ ಸೀತಾನದಿ ತಣ್ಣಗೆ, ಕಾಡೊಳಗೆ ಸದ್ದಿಲ್ಲದೆ ಮಡುಗಟ್ಟಿಕೊಂಡು ಕಪ್ಪಗೆ ಹರಿಯುತ್ತಿದೆ. [...]
Filed under: ಷಿಲ್ಲಾಂಗಿನಿಂದ ಲಂಕೇಶ | No Comments »
Posted on Saturday July 14, 2007 by Rasheed
ಪ್ರೀತಿಯ ಲಂಕೇಶರಿಗೆ,
ಇಲ್ಲಿ ಈಗ ಹೊರಗೆ ಪೂರ್ತಿ ಚಂದಿರನ ಬೆಳಕು. ಮನಸಲ್ಲಿ ಏನೂ ಇಟ್ಟುಕೊಳ್ಳದೆ ನಿಮಗೆ ಬರೆಯುತ್ತಿರುವೆ. ಈ ಚಂದಿರನ ಬೆಳಕಲ್ಲಿ ಮಂಗಳೂರಿನ ಕಡಲು ಹೇಗೆ ಇರಬಹುದು, ಕೊಡಗಿನ ಕೋಟೆ ಬೆಟ್ಟ ಹೇಗೆ ಹೊಳೆಯುತ್ತಿರಬಹುದು, ಹಗಲೆಲ್ಲಾ ರಾಜಕಾರಣದ ಕುರಿತು ಬರೆದು ಇರುಳಲ್ಲಿ ನೀವು ಏನು ಯೋಚಿಸುತ್ತಿರಬಹುದು ಎಂದೆಲ್ಲಾ ಯೋಚಿಸುತ್ತಾ ಕುಳಿತಿರುವೆ.
ಮೊನ್ನೆ ಇಲ್ಲಿಯ ಚುನಾವಣೆಯ ಕುರಿತು ಸಮೀಕ್ಷೆ ಬರೆಯಲು ತುರಾ ಎಂಬ ಊರಿಗೆ ಹೋಗಿ ಬಂದೆ.
Filed under: ಷಿಲ್ಲಾಂಗಿನಿಂದ ಲಂಕೇಶ | No Comments »
Posted on Tuesday July 10, 2007 by Rasheed
[೧೯೯೮-೯೯ ರಲ್ಲಿ ಮೇಘಾಲಯದ ರಾಜಧಾನಿ ಷಿಲ್ಲಾಂಗಿನಿಂದ ನಾನು ಪಿ.ಲಂಕೇಶರಿಗೆ ಬರೆದ ಪತ್ರಗಳನ್ನು ಈಗ ಒಂದೊಂದಾಗಿ ಪೋಸ್ಟ್ ಮಾಡುತ್ತಿರುವೆ . ಓದಿ ಖುಷಿ ಪಡಿ ಎನ್ನದೆ ಇನ್ನೇನು ಹೇಳಲಿ.]
ಪ್ರೀತಿಯ ಲಂಕೇಶರಿಗೆ,
ಇಲ್ಲಿ ಈಗ ಫೆಬ್ರವರಿಯ ಗಾಳಿ ಬೀಸಲು ಶುರುವಾಗಿದೆ. ರಾತ್ರಿಯೆಲ್ಲಾ ಪೈನ್ ಮರಗಳ ಎಡೆಯಿಂದ ಬೀಸುವಗಾಳಿ. ಬೆಳಗ್ಗೆ ಏಳುವ ಮೊದಲೇ ಅಷ್ಟು ಎತ್ತರಕ್ಕೆ ಬಂದಿರುವ ಸೂರ್ಯ. ಮುಂಜಾನೆ ಆರು ಆರೂವರೆಯ ಹೊತ್ತಿಗೆ ಇಡೀ ಊರು ಮಂದಹಾಸದಂತಹ ಬಿಸಿಲಿನಲ್ಲಿ ಲಕಲಕ ಹೊಳೆಯುತ್ತಿರುತ್ತದೆ. ಮಧ್ಯಾಹ್ನದ ಹೊತ್ತು ಮಾರುಕಟ್ಟೆಯಲ್ಲಿ ಬಿದಿರುಬುಟ್ಟಿಯ ತುಂಬಾ ಕಿತ್ತಳೆ ಹಣ್ಣುಗಳನ್ನು ಇಟ್ಟುಕೊಂಡು ಮಾರಲು ಕುಳುತಿರುವ [...]
Filed under: ಷಿಲ್ಲಾಂಗಿನಿಂದ ಲಂಕೇಶ | 1 Comment »