-
ರಾಮಚಂದ್ರ ಭಟ್ಟರೂ,ಕುಂಞಪ್ಪ ಬ್ಯಾರಿಗಳೂ
ಮತ್ತಷ್ಟು ಓದು: ರಾಮಚಂದ್ರ ಭಟ್ಟರೂ,ಕುಂಞಪ್ಪ ಬ್ಯಾರಿಗಳೂಇದು ಇಬ್ಬರು ಮುದುಕರ ಪ್ರೇಮದ ಕಥೆ. ಇಲ್ಲಿ ನಾಯಕರಿಲ್ಲ, ನಾಯಕಿಯರಿಲ್ಲ, ಖಳರಿಲ್ಲ, ವಿರಹವಿಲ್ಲ, ಅಸೂಯೆಯಿಲ್ಲ. ಎಲ್ಲವನ್ನೂ ವಿವರಿಸಿ ಹೇಳುವ ಕಾರ್ಯ ಮತ್ತು ಕಾರಣಗಳೆಂಬ ಸಂಬಂಧಗಳ ಹಂಗೂ ಈ ಮುದುಕರಿಗೆ ಇಲ್ಲ. ಯಾಕೆ ಈ ಪ್ರೇಮ ಎಂದು ಕೇಳಿದರೆ ಇದಕ್ಕೇ ಎಂದು ಖಂಡ ತುಂಡವಾಗಿ ಉತ್ತರಿಸಲೂ ಇವರಿಬ್ಬರಿಗೂ ಇಷ್ಟವಿಲ್ಲ. ಯಾಕೆಂದರೆ ಇವರಿಬ್ಬರಿಗೂ ಇದಕ್ಕೆ ಇದೇ ಉತ್ತರವೆಂಬುದು ಗೊತ್ತಿಲ್ಲ. ಇನ್ನೂ ಒತ್ತಾಯ ಮಾಡಿದರೆ ಒಬ್ಬರು ನಾಚಿಕೊಳ್ಳುತ್ತಾರೆ. ಇನ್ನೊಬ್ಬರು ಆಕಾಶದ ಕಡೆಗೆ ಕೈ ತೋರಿಸುತ್ತಾರೆ.